Webdunia - Bharat's app for daily news and videos

Install App

ಐತಿಹಾಸಿಕ ವೆಸ್ಲಿ ಸೇತುವೆ ಮುಳುಗಡೆ

Webdunia
ಮಂಗಳವಾರ, 17 ಜುಲೈ 2018 (18:16 IST)
ನದಿ ನೀರಿನ ರಭಸಕ್ಕೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ   200 ವರ್ಷಗಳ  ಐತಿಹಾಸಿಕ ಸೇತುವೆ, ನೋಡ ನೋಡುತ್ತಲೇ ಕಣ್ಮರೆಯಾಯಾಗಿದೆ

ಕಾವೇರಿಯ ರಭಸಕ್ಕೆ 200 ವರ್ಷಗಳ ಐತಿಹಾಸಿಕ ಸೇತುವೆ ಕೊಚ್ಚಿಹೋಗಿರುವ ಘಟನೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಕೋಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತಕ್ಕೆ ಹೋಗುವ ಮುನ್ನಾ ಸಿಗುವ ಐತಿಹಾಸಿಕ ವೆಸ್ಲಿ ಸೇತುವೆ ನೀರಿನ ಸೆಳವಿಗೆ ಸಿಲುಕಿ  ಇನ್ನಿಲ್ಲದಂತಾಗಿದೆ. ಟಿಪ್ಪು ಸುಲ್ತಾನ್ ರಾಜಾಡಳಿತದ 1818 ರಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆಯನ್ನ ಕಟ್ಟಲಾಗಿತ್ತು. 200 ವರ್ಷಗಳ ಹಿಂದೆ ಕಟ್ಟಿದ್ದ ಸೇತುವೆಗೆ  ಪರ್ಯಾಯವಾಗಿ ಮತ್ತೊಂದು ಸೇತುವೆ ನಿರ್ಮಾಣಗೊಂಡಿದೆಯಾದರೂ ಈ ಸೇತುವೆ ಮೂಲಕವೇ ಅನೇಕ ಪ್ರವಾಸಿಗರು ಭರಚುಕ್ಕಿಗೆ ತೆರಳಲು ಇಚ್ಛಿಸುತ್ತಿದ್ದರು.

ಸಂಪೂರ್ಣವಾಗಿ ಕಲ್ಲಿನಿಂದಲೇ ಕಟ್ಟಿರುವ ವೆಸ್ಲಿ ಸೇತುವೆ ಬಳಿ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಕಳೆದ ಮೂರು ದಿನದಿಂದ ಪ್ರವಾಸಿಗರಿಗೆ ಸ್ಥಳೀಯ ಆಡಳಿತ ನಿರ್ಬಂಧ ಹೇರಿತ್ತು. ಒಂದು ವೇಳೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಾರೀ ಅನಾಹುತವೇ ಸಂಭವಿಸುವುದರಲ್ಲಿ ಅನುಮಾನವೇ ಇಲ್ಲದಂತಾಗಿದೆ.  ಪ್ರವಾಸಿಗರನ್ನ ಆಕರ್ಷಿಸಿ, ಕೈ ಬೀಸಿ ಕರೆಯುತ್ತಿದ್ದ ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ವೆಸ್ಲಿ ಸೇತುವೆ ಕಾವೇರಿ ಸೆಳತಕ್ಕೆ ಇದೀಗ ಇತಿಹಾಸದ ಪುಟ ಸೇರಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments