Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯನವರ ಐತಿಹಾಸಿಕ ಸಾಧನೆ

Webdunia
ಶನಿವಾರ, 25 ಮಾರ್ಚ್ 2017 (10:52 IST)
ಸಮಾಜವಾದಿ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ನಿನ್ನೆ ವಿಧಾನಸಭೆಯಲ್ಲಿ ಐತಿಹಾಸಿಕ ಮಸೂದೆಯೊಂದಕ್ಕೆ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಿ, ಪಾಳ್ಯ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್`ಗಳಲ್ಲಿ ವಾಸಿಸುತ್ತಿರುವ ಜನರಿಗೆ ಸಿಎಂ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಇಂತಹ ದಾಖಲೆ ಇಲ್ಲದ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವವರ ಹೆಸರಿಗೇ ಮನೆ ನೋಂದಣಿ ಮಾಡಿಕೊಡುವ ಮಹತ್ವ ಭೂಸುಧಾರಣಾ ಅಧಿನಿಯಮ ಅಂಗೀಕಾರವಾಗಿದೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸ್ವಾತಂತ್ರ್ಯಾನಂತರ ನಂತರ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದಿತ್ತು. ನಾವು ವಾಸಿಸುವನೇ ಮನೆಯ ಒಡೆಯ ಯೋಜನೆ ಜಾರಿಗೆ ತಂದಿದ್ದೇವೆ. ಈ ಮೂಲಕ ಪ್ರಣಾಳಿಕೆಯಲ್ಲಿ ನೀಡಿದ ಬಹುದೊಡ್ಡ ಭರವಸೆಯನ್ನ ಈಡೇರಿಸಲಾಗಿದೆ ಎಂದು ತಿಳಿಸಿದರು.

ಸದನದಲ್ಲಿ ಮಂಡನೆಯಾದ ಈ ಐತಿಹಾಸಿಕ ಕಾಯ್ದೆಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಎಲ್ಲರೂ ಪಕ್ಷ ಭೇದ ಮರೆತು ಒಮ್ಮತ ಸೂಚಿಸಿದರು. ಧ್ವನಿಮತದ ಮೂಲಕ ಐತಿಹಾಸಿಕ ಕಾಯ್ದೆಯನ್ನ ಅಂಗೀಕರಿಸಲಾಗಿದೆ.

ಈ ಮೂಲಕ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿರುವ ಗೊಲ್ಲರಹಟ್ಟಿ, ಕುರುಬರಹಟ್ಟಿ, ವಡ್ಡರಹಟ್ಟಿ, ಲಂಬಾಣಿ ತಾಂಡಾ, ನಾಯಕರ ಹಟ್ಟಿ, ಪಂಜಾರೆ, ದೊಡ್ಡಿ ಜನರು ತಾವು ವಾಸಿಸುತ್ತಿರುವ ಮನೆಗಳ ಹಕ್ಕು ಪತ್ರ ಪಡೆದು ತಾವು ವಾಸಿಸುವ ಮನೆಯ ಒಡೆಯರಾಗಲಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments