Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯನವರ ಐತಿಹಾಸಿಕ ಸಾಧನೆ

Webdunia
ಶನಿವಾರ, 25 ಮಾರ್ಚ್ 2017 (10:52 IST)
ಸಮಾಜವಾದಿ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ನಿನ್ನೆ ವಿಧಾನಸಭೆಯಲ್ಲಿ ಐತಿಹಾಸಿಕ ಮಸೂದೆಯೊಂದಕ್ಕೆ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಿ, ಪಾಳ್ಯ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್`ಗಳಲ್ಲಿ ವಾಸಿಸುತ್ತಿರುವ ಜನರಿಗೆ ಸಿಎಂ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಇಂತಹ ದಾಖಲೆ ಇಲ್ಲದ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವವರ ಹೆಸರಿಗೇ ಮನೆ ನೋಂದಣಿ ಮಾಡಿಕೊಡುವ ಮಹತ್ವ ಭೂಸುಧಾರಣಾ ಅಧಿನಿಯಮ ಅಂಗೀಕಾರವಾಗಿದೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸ್ವಾತಂತ್ರ್ಯಾನಂತರ ನಂತರ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದಿತ್ತು. ನಾವು ವಾಸಿಸುವನೇ ಮನೆಯ ಒಡೆಯ ಯೋಜನೆ ಜಾರಿಗೆ ತಂದಿದ್ದೇವೆ. ಈ ಮೂಲಕ ಪ್ರಣಾಳಿಕೆಯಲ್ಲಿ ನೀಡಿದ ಬಹುದೊಡ್ಡ ಭರವಸೆಯನ್ನ ಈಡೇರಿಸಲಾಗಿದೆ ಎಂದು ತಿಳಿಸಿದರು.

ಸದನದಲ್ಲಿ ಮಂಡನೆಯಾದ ಈ ಐತಿಹಾಸಿಕ ಕಾಯ್ದೆಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಎಲ್ಲರೂ ಪಕ್ಷ ಭೇದ ಮರೆತು ಒಮ್ಮತ ಸೂಚಿಸಿದರು. ಧ್ವನಿಮತದ ಮೂಲಕ ಐತಿಹಾಸಿಕ ಕಾಯ್ದೆಯನ್ನ ಅಂಗೀಕರಿಸಲಾಗಿದೆ.

ಈ ಮೂಲಕ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿರುವ ಗೊಲ್ಲರಹಟ್ಟಿ, ಕುರುಬರಹಟ್ಟಿ, ವಡ್ಡರಹಟ್ಟಿ, ಲಂಬಾಣಿ ತಾಂಡಾ, ನಾಯಕರ ಹಟ್ಟಿ, ಪಂಜಾರೆ, ದೊಡ್ಡಿ ಜನರು ತಾವು ವಾಸಿಸುತ್ತಿರುವ ಮನೆಗಳ ಹಕ್ಕು ಪತ್ರ ಪಡೆದು ತಾವು ವಾಸಿಸುವ ಮನೆಯ ಒಡೆಯರಾಗಲಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಮೂರು ಜಿಲ್ಲೆ ಬಿಟ್ಟು ಮಳೆಯಲ್ಲ ಇಂದು ಬೆಂಕಿ ಮಳೆ ಗ್ಯಾರಂಟಿ

World International Workers Day: ಮೇ ಡೇ ಶುರುವಾಗಿದ್ದು ಇದೇ ಕಾರಣಕ್ಕೆ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಮುಂದಿನ ಸುದ್ದಿ
Show comments