Webdunia - Bharat's app for daily news and videos

Install App

ಕೊಪ್ಪಳದಲ್ಲಿ ಐತಿಹಾಸಿಕ ತೀರ್ಪು: ದಲಿತರ ಮೇಲೆ ದೌರ್ಜನ್ಯ ನಡೆಸಿದವರಿಗೆ ತಕ್ಕ ಶಿಕ್ಷೆ ಕೊಟ್ಟ ಕೋರ್ಟ್

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (11:15 IST)
ಕೊಪ್ಪಳ: ತಾಲೂಕಿನ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2014 ರಲ್ಲಿ ನಡೆದ ಪ್ರಕರಣ ಇದಾಗಿತ್ತು. ಮರುಕುಂಬಿಯ ಹೋಟೆಲ್ ಮತ್ತು ಕ್ಷೌರದ ಅಂಗಡಿ ವಿಚಾರದಲ್ಲಿ ಭಾರೀ ಗಲಾಟೆಯಾಗಿತ್ತು. ಈ ವೇಳೆ ಸವರ್ಣೀಯರು ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಹೋರಾಟಗಾರರು ಭಾರೀ ಹೋರಾಟ ನಡೆಸಿದ್ದರು.

ಪ್ರಕರಣದಲ್ಲಿ ಒಟ್ಟು 101 ಮಂದಿ ಆರೋಪಿಗಳಿದ್ದರು. ಈ ಪೈಕಿ 98 ಮಂದಿಗೆ ಜೀವಾವಧಿ ಶಿಕ್ಷೆ, ಉಳಿದ ಮೂವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2004 ರಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸವರ್ಣೀಯರು ಭತ್ತ ಸಂಗ್ರಹ ಮಾಡುತ್ತಿದ್ದುದನ್ನು ದಲಿತರು ಪ್ರಶ್ನೆ ಮಾಡಿದ್ದರು. ಈ ಸಂಬಂಧ ದಲಿತರು ಮತ್ತು ಸವರ್ಣೀಯರ ನಡುವೆ ಅಸಮಾಧಾನ ಭುಗಿಲೆದ್ದಿತ್ತು. 2014 ರಲ್ಲಿ ಶಿವೆ ಚಿತ್ರಮಂದಿರದಲ್ಲಿ ಕ್ಷುಲ್ಲುಕ ಕಾರಣಕ್ಕೆ ಇಬ್ಬರು ದಲಿತ ಯುವಕರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ್ದರು. ಇದು ಎರಡೂ ವರ್ಗದವರ ನಡುವೆ ಘರ್ಷಣೆ ಹೆಚ್ಚಾಗಲು ಕಾರಣವಾಗಿತ್ತು. ಈ ವೇಳೆ ಸವರ್ಣೀಯರು ದಲಿತರ ಕೇರಿಗೆ ನುಗ್ಗಿ ಬೆಂಕಿ ಹಚ್ಚಿದ್ದರು. ಅಷ್ಟೇ ಅಲ್ಲದೆ, ದಲಿತರ ಕ್ಷೌರದ ಅಂಗಡಿ, ಕೂಲಿ ಕೆಲಸಕ್ಕೆ ಬಹಿಷ್ಕಾರ ಹಾಕಿದ್ದರು. ಈ ಘರ್ಷಣೆಗೆ ಸಂಬಂಧಿಸಿದಂತೆ ಈಗ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments