Webdunia - Bharat's app for daily news and videos

Install App

ಹಿಟ್ ಆಂಡ್ ರನ್‍ಗೆ ಮೂವರು ಮಹಿಳೆಯರು ಬಲಿ

Webdunia
ಸೋಮವಾರ, 22 ಫೆಬ್ರವರಿ 2016 (11:42 IST)
ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಒಂದೇ ಕುಟುಂಬದ ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಬಳಿಯ ಸೋಲೂರಿನ ಅಂಚೆಪಾಳ್ಯದ ಬಳಿ ರವಿವಾರ ರಾತ್ರಿ ನಡೆದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಘಟನೆ ನಡೆದಿದ್ದು  ನೆಲಮಂಗಲದ  ಕುದುರೆಗೆರೆ ಕಾಲೋನಿಯ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಸುಬ್ರಮಣ್ಯ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದರು. ದಾರಿ ಮಧ್ಯೆ ರಸ್ತೆ ಪಕ್ಕ ಇದ್ದ ಹೊಟೆಲ್ ಒಂದರಲ್ಲಿ ಊಟ ಮುಗಿಸಿ ಹೊರಗೆ ನಿಂತಿದ್ದಾಗ ಮೂವರ ಮೇಲೆ ಹರಿದು ಹೋಗಿದೆ. ಪರಿಣಾಮ ರೇಣುಕಪ್ಪ, ಗಂಗಮ್ಮ ಹಾಗೂ ಸರೋಜಮ್ಮ ಎಂಬುವರು ದುರ್ಮರಣವನ್ನಪ್ಪಿದ್ದಾರೆ.ಅಪಘಾತ ಮಾಡಿದ ಕಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಾಗಡಿಯ ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಅಪರಿಚಿತ ಕಾರ್ ಚಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.  
 
ಮೃತರು ಊಟ ಮಾಡಿದ್ದ ಹೊಟೆಲ್ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಅಪಘಾತವೆಸಗಿದ ಕಾರ್ ಸುಳಿವು ಸಿಗಬಹುದೆನೋ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments