Select Your Language

Notifications

webdunia
webdunia
webdunia
webdunia

ಹಿಜಾಬ್ ಹಾಕಿಕೊಂಡು ಬಂದ್ರೆ ಒದೆ ಕೊಡಿ

ಹಿಜಾಬ್ ಹಾಕಿಕೊಂಡು ಬಂದ್ರೆ ಒದೆ ಕೊಡಿ
ಬೆಂಗಳೂರು , ಮಂಗಳವಾರ, 1 ಫೆಬ್ರವರಿ 2022 (16:03 IST)

ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ಕಿಡಿಕಾರಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಶಾಲೆಯೋ ಅಥವಾ ಧಾರ್ಮಿಕ ಕೇಂದ್ರವೋ. ನಿಮ್ಮ ಸ್ವತಂತ್ರ ಕೇವಲ ನಿಮ್ಮ ಮನೆಯಲ್ಲಿ ಇರಲಿ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು. ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್

ಚಿಂತಾಮಣಿ ಶಾಲೆಯ ಕೊಠಡಿಯಲ್ಲಿ ನಮಾಜ್ ಮಾಡಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ಬಹಳ ಹಿಂದೆ-ಮುಂದೆ ನೋಡುತ್ತಿದೆ. ಇದನ್ನ ಹಾಗೆ ಬಿಟ್ಟರೆ ಅವರು ಮುಂದಿನ ದಿನ ಭಯೋತ್ಪಾದಕರಾಗುತ್ತಾರೆ. ಬೆಂಗಳೂರು ರೈಲ್ವೆ ಸ್ಟೇಷನ್​ನಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಬಾಂಬ್ ಸಿಕ್ಕರೂ ಇನ್ನೂ ಆರೋಪಿಗಳನ್ನ ಹಿಡಿಯೋಕೆ ಆಗಿಲ್ಲ. ಹಿಜಾಬ್ ಅನ್ನೋದು ಇಲ್ಲಿಯವರೆಗೂ ಹೋಗಬಾರದಿತ್ತು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಟೋಯಿಂಗ್ ಕಿರಿಕ್ ಬಗ್ಗೆ ಅಧಿಕಾರಿಗಳಿಗೆ ಪಾಠ