ಚಳಿಗಾಲದ ಅಧಿವೇಶನದಲ್ಲಿ ಹೈ.ಕ. ಭಾಗದ ಸಮಸ್ಯೆಗಳ ಚರ್ಚೆಯಾಗಲಿ

Webdunia
ಶುಕ್ರವಾರ, 23 ನವೆಂಬರ್ 2018 (18:07 IST)
ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಸಮಸ್ಯೆಗಳನ್ನು ಹಾಗೂ ಇಲ್ಲಿರುವ ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಚರ್ಚೆಗಳಾಗಬೇಕು. ಹೀಗಂತ ಒತ್ತಾಯ ಕೇಳಿಬರುತ್ತಿದೆ.

ಅಧಿವೇಶನದಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಸಮಸ್ಯೆಗಳನ್ನು ಹಾಗೂ ಇಲ್ಲಿರುವ ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಚರ್ಚೆಗಳಾಗಬೇಕು.  ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. 

ಕಲಬುರಗಿ ಜಿಲ್ಲೆಯಲ್ಲಿ ಭೀಕರ ಬರಗಾಲದ ಛಾಯೆ ಮೂಡಿದೆ. ಹಿಂಗಾರು ಮತ್ತು ಮುಂಗಾರು ಬೆಳೆಗಳು ವಿಫಲವಾಗಿವೆ. ಕೇಂದ್ರ ಮತ್ತು ರಾಜ್ಯ ಅಧ್ಯಯನ ತಂಡಗಳು ಈ ಜಿಲ್ಲೆಯಲ್ಲಿ ಅಧ್ಯಯನ ನಡೆಸಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಚರ್ಚೆಗಳು ಆಗಬೇಕು. ಹೈದ್ರಾಬಾದ ಕರ್ನಾಟಕ ಭಾಗಕ್ಕೆ ನೀಡಲಾಗಿರುವ 371(ಜೆ) ಅಡಿಯ ಮೀಸಲು ನೇಮಕಾತಿ, ಮುಂಬಡ್ತಿ ವಿಷಯಗಳ ಬಗ್ಗೆಯೂ ಸಹ ಕೂಲಂಕುಷವಾಗಿ ಚರ್ಚೆಯಾಗಬೇಕಾಗಿದೆ ಎಂದರು.

ಮುಂಬಯಿಯಿಂದ ಚೆನ್ನೈವರೆಗೆ ಇಂಡಸ್ಟ್ರೀಯಲ್ ಕಾರಿಡಾರ್ ಆರು ಪಥದ ರಸ್ತೆ ನಿರ್ಮಾಣವಾಗುತ್ತಿದ್ದು, ಈ ರಸ್ತೆಯು ಕಲಬುರಗಿ ಜಿಲ್ಲೆಯಲ್ಲಿ ಹಾಯ್ದು ಹೋಗುವಂತೆ ನಿರ್ಮಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ರಸ್ತೆಯು ಅಕ್ಕಲಕೋಟ-ಅಫಜಲಪುರ-ದೇವಲಗಾಣಗಾಪುರ-ಜೇವರ್ಗಿ-ಅಂದೋಲಾ-ಶಹಾಪುರ-ಬಾಡಿಹಾಳ-ಸೈದಾಪುರದಿಂದ ಕರ್ನೂಲ್-ತಿರುಪತಿ-ಚೆನ್ನೈವರೆಗೆ ನಿರ್ಮಾಣವಾಗುತ್ತಿದೆ. ಕಲಬುರಗಿ ಜಿಲ್ಲೆಯಿಂದ ಹಾಯ್ದು ಹೋಗುವ ಇಂಡಸ್ಟ್ರೀಯಲ್ ಕಾರಿಡಾರ ರಸ್ತೆಯು ಚೆನ್ನೈ-ಮುಂಬಯಿ ಮಧ್ಯೆ 160 ಕಿ.ಮೀ. ದೂರ ಕಡಿಮೆ ಮಾಡಲಿದೆ. 2500 ಕೋಟಿ ರೂ. ವೆಚ್ಚದಲ್ಲಿ ಕರ್ನೂಲ್‍ದಿಂದ ಅಕ್ಕಲಕೋಟವರೆಗೆ ಆರು ಪಥದ ರಸ್ತೆ ನಿರ್ಮಾಣವಾಗಲಿದ್ದು, ಈಗಾಗಲೇ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ

ಗೋವಾ ಪಬ್ ದುರಂತ: ಬೆಂಗಳೂರಿನ ಪಬ್‌ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ

ಮುಂದಿನ ಸುದ್ದಿ
Show comments