Webdunia - Bharat's app for daily news and videos

Install App

ಹೆಚ್.ಕೆ.ಇ ಸಂಸ್ಥೆ ಚುನಾವಣೆ ಭೀಮಳ್ಳಿಗೆ ಭಾರೀ ಮುಖಭಂಗ

Webdunia
ಸೋಮವಾರ, 26 ಮಾರ್ಚ್ 2018 (13:05 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶದ ಪ್ರಮುಖ ಶಿಕ್ಷಣ ಸಂಸ್ಥೆಯಾಗಿರುವ ಕಲಬುರಗಿ ನಗರದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಭೀಮಾಶಂಕರ್ ಬಿಲಗುಂದಿ ಆಯ್ಕೆಯಾಗಿದ್ದಾರೆ.

ನಗರದ ಪಿಡಿಎ ಇಂಜಿನೀಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ತಮ್ಮ  ಪ್ರತಿಸ್ಪರ್ಧಿ ಹಾಗೂ ಹಾಲಿ ಅಧ್ಯಕ್ಷ ಬಸವರಾಜ್ ಭೀಮಳ್ಳಿ ಅವರನ್ನು ನೂರಾ ಹದಿಮೂರು ಮತಗಳ ಅಂತರದಿಂದ ಸೋಲಿಸುವ ಮೂಲಕ ಸಂಸ್ಥೆಯ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
 
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಲಗುಂದಿ ಪ್ಯಾನಲ್ ನಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಾ. ಶಿವಾನಂದ್ ದೇವರಮನಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಹದಿಮೂರು ಸ್ಥಾನಗಳ ಪೈಕಿ ಎಂಟು ಸ್ಥಾನಗಳು ಬಿಲಗುಂದಿ ಪ್ಯಾನಲ್ ಪಾಲಾದ್ರೆ ಐದು ಸ್ಥಾನಗಳು ಮಾತ್ರ ಭೀಮಳ್ಳಿ ಪ್ಯಾನಲ್ ನವರು ಗೆದ್ದಿದ್ದಾರೆ.
 
ನಿನ್ನೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ  ಅಧ್ಯಕ್ಷ, ಉಪಾಧ್ಯಕ್ಷ ತಲಾ ಒಂದು ಹುದ್ದೆ, ಹಾಗೂ 13 ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಮತದಾನ ನಡೆದಿತ್ತು. ಇಂದು ಮತ ಎಣಿಕೆ ಮಾಡಲಾಯಿತು. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಬಿಲಗುಂದಿ ಪ್ಯಾನಲ್ ಸಂಸ್ಥೆಯ ಚುಕ್ಕಾಣಿ ಹಿಡಿಯುವಲ್ಲಿ ಸಫಲವಾಗಿದೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಬಿಲಗುಂದಿ ಪ್ಯಾನೆಲ್ ನ  ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments