Webdunia - Bharat's app for daily news and videos

Install App

ಗ್ಯಾರಂಟಿ ಸಮಿತಿಗೆ 5, 6 ಕೋಟಿ ಖರ್ಚು ಮಾಡಿದ್ರೆ ತಪ್ಪಾ ಎಂದ ರೇವಣ್ಣ: ನಿಮ್ಮ ಸ್ವಂತ ಹಣ ಕೊಡಿ ಎಂದ ನೆಟ್ಟಿಗರು

Krishnaveni K
ಬುಧವಾರ, 12 ಮಾರ್ಚ್ 2025 (14:08 IST)
Photo Credit: X
ಬೆಂಗಳೂರು:  ರಾಜ್ಯ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಬಗ್ಗೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್ಎಂ ರೇವಣ್ಣ 5,6 ಕೋಟಿ ಕೊಟ್ಟರೆ ತಪ್ಪೇನು ಎಂದಿದ್ದಾರೆ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಜನರು ನಿಮ್ಮ ಹಣವನ್ನೇ ಕೊಡಿ, ನಮ್ಮ ತೆರಿಗೆ ಹಣ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯವರಿಗೆ ಬೇರೆ ಏನೂ ವಿಷಯ ಇಲ್ಲ. ಭಾವನಾತ್ಮಕ ವಿಷಯವನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಜನರ ಬದುಕನ್ನು ನೋಡುತ್ತೇವೆ.  ನಮ್ಮ ಎಲ್ಲಾ ಯೋಜನೆಗಳೂ ಸಮಾಜದ ಕಟ್ಟಕಡೆಯ ಜನರಿಗೂ ತಲುಪಬೇಕು ಎನ್ನುವ ಉದ್ದೇಶದಿಂದ ಮಾಡುತ್ತೇವೆ.


ಇದೇ ಕಾರಣಕ್ಕೆ ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ಸಮಿತಿ ಮಾಡಿ ಅವರಿಗೆ ಸ್ವಲ್ಪ ಸವಲತ್ತು ಕೊಟ್ಟಿದೆ. ಅದೇನೂ ದೊಡ್ಡ ವಿಷಯ ಅಲ್ಲ. 50,000 ಕೋಟಿ ಖರ್ಚು ಆಗುವ ಕಡೆಗೆ 5,6 ಕೋಟಿ ಇದಕ್ಕಾಗಿ ಖರ್ಚು ಮಾಡುವುದು ತಪ್ಪಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಜನ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು ಕೊಡಬೇಕೆಂದರೆ ನಿಮ್ಮ ಹಣದಲ್ಲೇ ಕೊಡಿ. ನಮ್ಮ ತೆರಿಗೆ ಹಣದಲ್ಲಿ ಯಾಕೆ ಕೊಡುತ್ತೀರಿ? ಬರೀ 5,6 ಕೋಟಿ ಎಂದು ಎಷ್ಟು ಸುಲಭವಾಗಿ ಹೇಳುತ್ತೀರಿ, ಅದೇನು ಸಣ್ಣ ಮೊತ್ತವಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments