Webdunia - Bharat's app for daily news and videos

Install App

ಗ್ಯಾರಂಟಿ ಸಮಿತಿಗೆ 5, 6 ಕೋಟಿ ಖರ್ಚು ಮಾಡಿದ್ರೆ ತಪ್ಪಾ ಎಂದ ರೇವಣ್ಣ: ನಿಮ್ಮ ಸ್ವಂತ ಹಣ ಕೊಡಿ ಎಂದ ನೆಟ್ಟಿಗರು

Krishnaveni K
ಬುಧವಾರ, 12 ಮಾರ್ಚ್ 2025 (14:08 IST)
Photo Credit: X
ಬೆಂಗಳೂರು:  ರಾಜ್ಯ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಬಗ್ಗೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್ಎಂ ರೇವಣ್ಣ 5,6 ಕೋಟಿ ಕೊಟ್ಟರೆ ತಪ್ಪೇನು ಎಂದಿದ್ದಾರೆ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಜನರು ನಿಮ್ಮ ಹಣವನ್ನೇ ಕೊಡಿ, ನಮ್ಮ ತೆರಿಗೆ ಹಣ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯವರಿಗೆ ಬೇರೆ ಏನೂ ವಿಷಯ ಇಲ್ಲ. ಭಾವನಾತ್ಮಕ ವಿಷಯವನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಜನರ ಬದುಕನ್ನು ನೋಡುತ್ತೇವೆ.  ನಮ್ಮ ಎಲ್ಲಾ ಯೋಜನೆಗಳೂ ಸಮಾಜದ ಕಟ್ಟಕಡೆಯ ಜನರಿಗೂ ತಲುಪಬೇಕು ಎನ್ನುವ ಉದ್ದೇಶದಿಂದ ಮಾಡುತ್ತೇವೆ.


ಇದೇ ಕಾರಣಕ್ಕೆ ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ಸಮಿತಿ ಮಾಡಿ ಅವರಿಗೆ ಸ್ವಲ್ಪ ಸವಲತ್ತು ಕೊಟ್ಟಿದೆ. ಅದೇನೂ ದೊಡ್ಡ ವಿಷಯ ಅಲ್ಲ. 50,000 ಕೋಟಿ ಖರ್ಚು ಆಗುವ ಕಡೆಗೆ 5,6 ಕೋಟಿ ಇದಕ್ಕಾಗಿ ಖರ್ಚು ಮಾಡುವುದು ತಪ್ಪಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಜನ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು ಕೊಡಬೇಕೆಂದರೆ ನಿಮ್ಮ ಹಣದಲ್ಲೇ ಕೊಡಿ. ನಮ್ಮ ತೆರಿಗೆ ಹಣದಲ್ಲಿ ಯಾಕೆ ಕೊಡುತ್ತೀರಿ? ಬರೀ 5,6 ಕೋಟಿ ಎಂದು ಎಷ್ಟು ಸುಲಭವಾಗಿ ಹೇಳುತ್ತೀರಿ, ಅದೇನು ಸಣ್ಣ ಮೊತ್ತವಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments