Publish Date: Fri, 05 Aug 2022 (11:57 IST)
Updated Date: Fri, 05 Aug 2022 (12:59 IST)
ಚಾಮರಾಜನಗರ : ಭಾರೀ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಮಂಡ್ಯ ಹಾಗೂ ಚಾಮರಾಜನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಡ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್ಎಸ್ ಡ್ಯಾಂ ಈಗಾಗಲೇ ತುಂಬಿದ್ದು, ಜೀವನದಿ ಕಾವೇರಿ ಸೇರಿದಂತೆ ಅನೇಕ ನದಿಗಳು ಉಕ್ಕಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ, ಎಲ್.ಕೆ.ಜಿ, ಯುಕೆಜಿ ಸೇರಿದಂತೆ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡುವಂತೆ ಮಂಡ್ಯ ಡಿ ಅಶ್ವಥಿ ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ಮಳೆಯಿಂದ ಹಲವಡೆ ಈಗಾಗಲೇ ಅವಾಂತರ ಸೃಷ್ಟಿ ಮಾಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಮುನ್ನಚ್ಚರಿಕೆವಾಗಿ ನಾಳೆ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ.