Webdunia - Bharat's app for daily news and videos

Install App

ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಯುವಕ ಸಾವು

Webdunia
ಬುಧವಾರ, 11 ಜನವರಿ 2023 (18:11 IST)
ಸರಿಯಾದ ಚಿಕಿತ್ಸೆ ಸಿಗದೆ ಯುವಕನೋರ್ವ ಸಾವನಪ್ಪಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾಸರಹಳ್ಳಿ ಬಳಿ ಇರುವ ಮಧು ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸತೀಶ್ ಸಾವನಪ್ಪಿರುವ ಯುವಕ. 9ನೇ ತಾರೀಖು ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ ಸತೀಶ್ ಮತ್ತು ಸ್ನೇಹಿತರ ನಡುವ ಗಲಾಟೆಯಾಗಿದೆ. ಬಳಿಕ ಸತೀಶ್​​​ ಎಡಗೈಗೆ ಗಾಯವಾಗಿತ್ತು.
ಕೂಡಲೆ ಸ್ಥಳೀಯ ಮಧು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಎರಡು ದಿನ ಯಾವುದೇ ಚಿಕಿತ್ಸೆ ನೀಡಿಲ್ಲ. ಕೇವಲ ಬ್ಯಾಂಡೇಜ್ ಸುತ್ತಿದ್ದಾರಂತೆ. 50 ಸಾವಿರಕ್ಕೂ ಹೆಚ್ಚು ಹಣವನ್ನು ಆಸ್ಪತ್ರೆಯವರು ಕಟ್ಟಿಸಿಕೊಂಡಿದ್ದರಂತೆ. ನಿನ್ನೆ ಸಂಜೆ ಸತೀಶ್​​​​ ತೀವ್ರ ರಕ್ತಸ್ರಾವವಾಗಿ ಸಾವನಪ್ಪಿದ್ದಾನೆ. ಇದಕ್ಕೆ ರೊಚ್ಚಿಗೆದ್ದ ಮೃತನ ಮನೆಯವರು, ಆಸ್ಪತ್ರೆಯ ಬಳಿ ತೆರಳಿ ಗಲಾಟೆ ಮಾಡಿದ್ದಾರೆ. ಯುವಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು   ಕುಟುಂಬಸ್ಥರು ಆರೋಪಿಸಿದ್ದಾರೆ. ಕೂಡಲೇ ಗೋವಿಂದರಾಜನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಗೋವಿಂದರಾಜನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments