Webdunia - Bharat's app for daily news and videos

Install App

ಗೃಹ ಸಚಿವ ಅರಗ ಜ್ಞಾನೇಂದ್ರ ಅಧಿಕಾರವಹಿಸಿಕೊಂಡ ಮೊದಲ ವರ್ಗಾವಣೆ ಪಟ್ಟಿ ಬಿಡುಗಡೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (16:30 IST)
ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ವರ್ಗಾವಣೆ ಪಟ್ಟಿ ಬಿಡಗುಡೆಯಾಗಿದೆ. ಪೊಲೀಸ್ ಪ್ರಧಾನ ಕಚೇರಿಯಲ್ಲಿದ್ದ ನಾಲ್ವರು ಡಿವೈಎಸ್ಪಿ ಹಾಗೂ 73 ಪೊಲೀಸ್ ಇನ್‌ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿರುವ ಆದೇಶ ಹೊರ ಬಿದ್ದಿದೆ.
ಬೆಂಗಳೂರಿನ ಹತ್ತಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ಪೊಲೀಸ್ ಇನ್ಸಪೆಕ್ಟರ್ ಗಳನ್ನು ವರ್ಗವಣೆ ಮಾಡಲಾಗಿದೆ. ಕೆಲವರಿಗೆ ಸಿಐಡಿ ಇನ್ನೂ ಕೆಲವರಿಗೆ ಸೈಬರ್ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.
 
ಅಧಿವೇಶನ ಮುಗಿದ ಸೆ. 25 ರಂದೇ ವರ್ಗಾವಣೆ ಪಟ್ಟಿ ಬಿಡುಗಡೆ ಆಗುತ್ತದೆ ಎಂದೇ ಪೊಲೀಸ್ ಇಲಾಖೆಯಲ್ಲಿ ಭಾವಿಸಲಾಗಿತ್ತು. ಆದರೆ, ಎರಡು ವಾರ ಕಳೆದರೂ ಪೊಲೀಸ್ ಇಲಾಖೆಯಲ್ಲಿ ಯಾವ ವರ್ಗಾವಣೆ ಪಟ್ಟಿಯೂ ಹೊರ ಬಿದ್ದಿರಲಿಲ್ಲ. ಹೀಗಾಗಿ ಪೊಲೀಸ್ ಹುದ್ದೆ ನಿರೀಕ್ಷಣೆಯಲ್ಲಿದ್ದವರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಡಿವೈಎಸ್ಪಿಗಳ ಹುದ್ದೆ ವಿಚಾರಕ್ಕೆ ಬಂದರೆ ಯಾವುದೇ ಪೋಸ್ಟಿಂಗ್ ಇಲ್ಲದೇ ಕಾಯುತ್ತಿದ್ದ ರಾಜು, ಚಂದನ್ ಕುಮಾರ್, ಡಾ. ದೇವರಾಜ್ ಬಿ., ಲಕ್ಷ್ಮಯ್ಯ ವಿ ಅವರನ್ನಷ್ಟೇ ವರ್ಗಾವಣೆ ಮಾಡಲಾಗಿದೆ. ಉಳದಿಂತೆ ಯಾವುದೇ ಡಿವೈಎಸ್ಪಿ ಹುದ್ದೆಗಳ ವರ್ಗಾವಣೆಯಾಗಿಲ್ಲ.
 
ಪೊಲೀಸ್ ಇನ್‌ಸ್ಪೆಕ್ಟರ್ ಗಳ ವರ್ಗಾವಣೆ ವಿಚಾರಕ್ಕೆ ಬಂದರೆ ವಿವಿಧ ಜಿಲ್ಲೆಗಳ 73 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಗೃಹ ಸಚಿವರಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ತಿಂಗಳಿಗೊಂದು ವರ್ಗಾವಣೆ ಪಟ್ಟಿ ಹೊರ ಬೀಳುತ್ತಿತ್ತು. ಇದು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು. ಆನಂತರದ ಬೆಳವಣಿಗೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಈಗಲೂ ಪೊಲೀಸ್ ಇಲಾಖೆ, ಇಲಾಖೆಯ ಪ್ರಗತಿ ಪರಿಶೀಲನೆ ಬಗ್ಗೆ ಹಾಲಿ ಸಿಎಂ ಹೆಚ್ಚು ಉತ್ಸುಕತೆ ತೋರುತ್ತಿದ್ದಾರೆ ಎಂದು ಹೇಳಲಾಗಿದೆ. ನೂತನ ಗೃಹ ಸಚಿವರಾಗಿ ಅಗರ ಜ್ಞಾನೇಂದ್ರ ಪ್ರಮಾಣ ವಚನ ಸ್ವೀಕರಿಸಿದ ಎರಡು ತಿಂಗಳ ಬಳಿಕ ಮೊದಲ ವರ್ಗಾವಣೆ ಪಟ್ಟಿ ಹೊರ ಬಿದ್ದಿದೆ.
 
 
 
ವರ್ಗಾವಣೆ ಬಗ್ಗೆ ಕೇಳಿದ್ದಕ್ಕೆ ಸಿಎಂ ಮುನಿಸು: ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಮಾಧ್ಯಮಗಳ ಸುದ್ದಿಗೋಷ್ಠಿ ಕರೆದಿದ್ದರು. ಗೃಹ ಸಚಿವ ಅರಗ ಜ್ಞಾನೇಂದ್ರ ಇದ್ದರೂ, ಸುದ್ದಿಗೋಷ್ಠಿ ಬೊಮ್ಮಾಯಿ ಅವರದ್ದೇ ಆಗಿತ್ತು. ಇನ್ನೇನು ಮಾತು ಆರಂಭಿಸುವ ವೇಳೆ ಪತ್ರಕರ್ತರು ' ವರ್ಗಾವಣೆಯಲ್ಲಿ ಆಗುವ ದಂಧೆ, ಪ್ರಾಮಾಣಿಕ ಅಧಿಕಾರಿಗಳಿಗೆ ಪೋಸ್ಟಿಂಗ್ ಕೊಡುವುದಿಲ್ಲ ಎಂಬುದರ ಬಗ್ಗೆ ಪ್ರಸ್ತಾಪಿಸಿದರು. ಈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಸುದ್ದಿಗೋಷ್ಠಿಯನ್ನೇ ಸಿಎಂ ರದ್ದು ಮಾಡಿ ಹೊರ ನಡೆದಿದ್ದರು.
 
 
 
74 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪಟ್ಟಿ ಇಲ್ಲಿದೆ
 
ಸುದರ್ಶನ್ - ಜಿಗಣಿ ಪೊಲೀಸ್ ಠಾಣೆ ಬೆಂಗಳೂರು
 
ಮಂಜು ಬಿ.ಪಿ. ಸಿಇಎನ್ ಠಾಣೆ, ಚಿಕ್ಕಬಳ್ಳಾಪುರ,
 
 
 
ಕೆ. ಟಿ. ನಾಗರಾಜು, ಸಂಪಿಗೆಹಳ್ಳಿ ಪೊಲೀಸ್ ಠಾಣೆ, ಬೆಂಗಳೂರು
 
ಪ್ರವೀಣ್ ಎಂ. ಚಿಕ್ಕಜಾಲ ಪೊಲೀಸ್ ಠಾಣೆ, ಬೆಂಗಳೂರು
 
ಪ್ರಭು ಆರ್‌. ಗಂಗನಹಳ್ಳಿ, ಸಿಸಿಬಿ ಬೆಂಗಳೂರು,
 
ಮನೋಜ್ ಎಚ್ ಹೂವಳೆ, ಚಂದ್ರಾಲೇಔಟ್ ಪೊಲೀಸ್ ಠಾಣೆ
dc

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments