Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಹೆಚ್ಚುವರಿ ಆಕ್ಸಿಜನ್ ನೀಡಲು ಕೇಂದ್ರ ಒಪ್ಪಿಗೆ- ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯಕ್ಕೆ ಹೆಚ್ಚುವರಿ ಆಕ್ಸಿಜನ್ ನೀಡಲು ಕೇಂದ್ರ ಒಪ್ಪಿಗೆ- ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಬೆಂಗಳೂರು , ಭಾನುವಾರ, 25 ಏಪ್ರಿಲ್ 2021 (11:29 IST)
ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ಆಕ್ಸಿಜನ್ ನೀಡಲು ಕೇಂದ್ರ ಒಪ್ಪಿಗೆ ನೀಡಿದೆ. ಸುಮಾರು 800 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಲು ಕೇಂದ್ರ ಒಪ್ಪಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಪ್ರತಿದಿನ ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿದೆ. ನಮ್ಮ ಪವರ್ ಪ್ಲ್ಯಾಟ್ ನಲ್ಲೂ ಆಕ್ಸಿಜನ್ ಉತ್ಪಾದನೆ ಮಾಡುತ್ತಿದ್ದೇವೆ. ಒಟ್ಟಾರೆ ನಾವು ಕ್ರಮ ಕೈಗೊಳ್ಳಲು  ಎಲ್ಲಾ ರೀತಿಯ ಪ್ರಯತ್ನ ಪಡುತ್ತಿದ್ದೇವೆ ಎಂದು ಹೇಳಿದ್ದಾರೆ. 

ವಿಕೇಂಡ್ ಕರ್ಪ್ಯೂ ಯಶಸ್ವಿಯಾಗಿದೆ.  ಜನರು ಸಹಕಾರ ನೀಡಿದ್ದಾರೆ. ಪೊಲೀಸರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನಿನ್ನೆ ಸಂಜೆ ಸಿಎಂ ಜೊತೆ ಸಭೆ ನಡೆಸಲಾಯಿತು. ವಿಕೇಂಡ್ ಲಾಕ್ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ಈಗಿರುವ ಮಾರ್ಗಸೂಚಿ ಮುಂದುವರಿಯುತ್ತೆಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಳಿ ಮೊಟ್ಟೆ ಇಡದಿದ್ದಕ್ಕೆ ಫುಡ್ ಕಂಪೆನಿಯ ವಿರುದ್ಧ ದೂರು ದಾಖಲಿಸಲು ಹೊರಟ ವ್ಯಕ್ತಿ