Webdunia - Bharat's app for daily news and videos

Install App

ಗೃಹಸಚಿವ ಜಿ. ಪರಮೇಶ್ವರ್‌ ವಾರ್ನಿಂಗ್‌ ಗೆ ಈಶ್ವರಪ್ಪ ಸವಾಲ್‌

geetha
ಶುಕ್ರವಾರ, 9 ಫೆಬ್ರವರಿ 2024 (15:00 IST)
ಶಿವಮೊಗ್ಗ :ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಕೆ.ಎಸ್‌. ಈಶ್ವರಪ್ಪ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ಇಬ್ಬರನ್ನೂ ಗುಂಡಿಟ್ಟು ಕೊಲ್ಲುವ ಕಾನೂನು ಬರಬೇಕು.ರಾಷ್ಟ್ರದ್ರೋಹಿಗಳಾದ ಇವರನ್ನು ಕಾಂಗ್ರೆಸ್‌ ತನ್ನ ಪಕ್ಷದಿಂದ ಹೊರಹಾಕಬೇಕು ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಗೃಹಸಚಿವ ಜಿ. ಪರಮೇಶ್ವರ್‌ ಇಂದು ಹೇಳಿದ್ದರು. 
 
ಇದಕ್ಕೆ ಪ್ರತಿಕ್ರಿಯಿಸಿರುವ ಕೆ.ಎಸ್‌. ಈಶ್ವರಪ್ಪ, ಡಿಕೆ ಸೋದರರು ಭಾರತವನ್ನು ವಿಭಜಿಸುವ ಹೇಳಿಕೆ ನೀಡಿದ್ದಾರೆ. ಇದಕ್ಕೆ ವಿನಯ್‌ ಕುಲಕರ್ಣಿ ಬೆಂಬಲ ನೀಡಿದ್ದಾರೆ. ಇವರ ಹೇಳಿಕೆಯನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ಸಿಎಂ ಸಿದ್ದರಾಮಯ್ಯನವರೇ ಖಂಡಿಸಿದ್ದಾರೆ. ಒಂದು ವೇಳೆ ನನ್ನ ಮೇಲೆ ಕೇಸ್‌ ಹಾಕಿದರೆ ಮಲ್ಲಿಕಾರ್ಜುನ ಖರ್ಗೆ ಅವರೂ ಕೋರ್ಟಿಗೆ ಬರಬೇಕು ಎಂದರು. 

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ  ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ್‌ ನೀಡಿರುವ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ಹೇಳಿಕೆಗೆ ನಾನು ಈಗಲೂ ಬದ್ದನಾಗಿದ್ದೇನೆ. ತಾಕತ್ತಿದ್ದರೆ ನನ್ನ ಮೇಲೆ ಕೇಸ್‌ ಹಾಕಲಿ ಎಂದು ಈಶ್ವರಪ್ಪ ಗುಡುಗಿದ್ದಾರೆ. ಜೊತೆಗೆ, ನ್ಯಾಯಾಲಯವು ದೇಶಭಕ್ತರಿಗೆ ಮನ್ನಣೆ ನೀಡುವುದೋ ಇಲ್ಲವೋ ಎಂದು ತಿಳಿಯಲಿದೆ ಎಂದು ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments