Webdunia - Bharat's app for daily news and videos

Install App

ಗೃಹಸಚಿವ ಜಿ. ಪರಮೇಶ್ವರ್‌ ವಾರ್ನಿಂಗ್‌ ಗೆ ಈಶ್ವರಪ್ಪ ಸವಾಲ್‌

geetha
ಶುಕ್ರವಾರ, 9 ಫೆಬ್ರವರಿ 2024 (15:00 IST)
ಶಿವಮೊಗ್ಗ :ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಕೆ.ಎಸ್‌. ಈಶ್ವರಪ್ಪ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ಇಬ್ಬರನ್ನೂ ಗುಂಡಿಟ್ಟು ಕೊಲ್ಲುವ ಕಾನೂನು ಬರಬೇಕು.ರಾಷ್ಟ್ರದ್ರೋಹಿಗಳಾದ ಇವರನ್ನು ಕಾಂಗ್ರೆಸ್‌ ತನ್ನ ಪಕ್ಷದಿಂದ ಹೊರಹಾಕಬೇಕು ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಗೃಹಸಚಿವ ಜಿ. ಪರಮೇಶ್ವರ್‌ ಇಂದು ಹೇಳಿದ್ದರು. 
 
ಇದಕ್ಕೆ ಪ್ರತಿಕ್ರಿಯಿಸಿರುವ ಕೆ.ಎಸ್‌. ಈಶ್ವರಪ್ಪ, ಡಿಕೆ ಸೋದರರು ಭಾರತವನ್ನು ವಿಭಜಿಸುವ ಹೇಳಿಕೆ ನೀಡಿದ್ದಾರೆ. ಇದಕ್ಕೆ ವಿನಯ್‌ ಕುಲಕರ್ಣಿ ಬೆಂಬಲ ನೀಡಿದ್ದಾರೆ. ಇವರ ಹೇಳಿಕೆಯನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ಸಿಎಂ ಸಿದ್ದರಾಮಯ್ಯನವರೇ ಖಂಡಿಸಿದ್ದಾರೆ. ಒಂದು ವೇಳೆ ನನ್ನ ಮೇಲೆ ಕೇಸ್‌ ಹಾಕಿದರೆ ಮಲ್ಲಿಕಾರ್ಜುನ ಖರ್ಗೆ ಅವರೂ ಕೋರ್ಟಿಗೆ ಬರಬೇಕು ಎಂದರು. 

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ  ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ್‌ ನೀಡಿರುವ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ಹೇಳಿಕೆಗೆ ನಾನು ಈಗಲೂ ಬದ್ದನಾಗಿದ್ದೇನೆ. ತಾಕತ್ತಿದ್ದರೆ ನನ್ನ ಮೇಲೆ ಕೇಸ್‌ ಹಾಕಲಿ ಎಂದು ಈಶ್ವರಪ್ಪ ಗುಡುಗಿದ್ದಾರೆ. ಜೊತೆಗೆ, ನ್ಯಾಯಾಲಯವು ದೇಶಭಕ್ತರಿಗೆ ಮನ್ನಣೆ ನೀಡುವುದೋ ಇಲ್ಲವೋ ಎಂದು ತಿಳಿಯಲಿದೆ ಎಂದು ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments