Webdunia - Bharat's app for daily news and videos

Install App

ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು: ಬಸವರಾಜ್ ಹೊರಟ್ಟಿ

Webdunia
ಭಾನುವಾರ, 31 ಜುಲೈ 2016 (12:58 IST)
ಧಾರವಾಡ ಪೊಲೀಸರಿಂದ ಮಹದಾಯಿ ಹೋರಾಟಗಾರರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಆಗ್ರಹಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೊಲೀಸರಿಂದ ಹೋರಾಟಗಾರರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಅಮಾನವೀಯ ಹಲ್ಲೆಗೆ ಸಂಬಂಧಿಸಿದಂತೆ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ರಾಜ್ಯ ಸರಕಾರ ಮಾನಮೀಯತೆ ಮರೆಯುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಅಮಾಯಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
 
ಇದೆ ಬುಧವಾರದಿಂದ ನಾವು ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ನಾವು ಠಿಕಾಣಿ ಹೂಡುತ್ತೇವೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂದಿಸಿದಂತೆ ನಿಜವಾದ ಹೋರಾಟವನ್ನು ನಾವು ಆರಂಭಿಸುತ್ತೇವೆ. ಯಾವ ಪೊಲೀಸರು ಬರುತ್ತಾರೋ ನೋಡೋಣ ಎಂದು ಸವಾಲ್ ಎಸೆದದಿದ್ದಾರೆ.
 
ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿ ವಜಾಗೊಳ್ಳಲು ಬಿಜೆಪಿ ನಾಯಕರ ವರ್ತನೆಯೇ ಕಾರಣ ಎಂದು ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆರೆಮನೆಯವಳನ್ನು ಎಳೆದಾಡಿ ಹಲ್ಲೆ ಮಾಡಿದ ಮೊಹಮ್ಮದ್ ಶಮಿ ಮಾಜಿ ಪತ್ನಿ: ವಿಡಿಯೋ ವೈರಲ್

ಬಿಕ್ಲು ಶಿವು ಮರ್ಡರ್ ಕೇಸ್: ಬೈರತಿ ಬಸವರಾಜು ಬಂಧಿಸಲು ಪೊಲೀಸರಿಗೆ ಸಿಕ್ಕಿದೆ ಅಸ್ತ್ರ

ಬಿಜೆಪಿ ಶಾಸಕರಿಗೆ ಯಾಕೆ ಕಡಿಮೆ ಅನುದಾನ: ಬಿವೈ ವಿಜಯೇಂದ್ರ ರೋಷಾವೇಷ

ಶಾಸಕರ ಅಸಮಾಧಾನ ತೀರಿಸಲು ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಹೃದಯದ ಆರೋಗ್ಯ ಚೆನ್ನಾಗಿರಬೇಕಾದರೆ ಈ 5 ಸರಿಯಾಗಿರಬೇಕು

ಮುಂದಿನ ಸುದ್ದಿ
Show comments