Webdunia - Bharat's app for daily news and videos

Install App

ವಿಜಯಪುರ ರೈತರಿಗೆ ವಕ್ಫ್ ನೋಟಿಸ್: ಅದರದ್ದು ಏನೂ ತೊಂದರೆಯಿಲ್ಲ ಎಂದ ಗೃಹಸಚಿವ ಜಿ ಪರಮೇಶ್ವರ್

Krishnaveni K
ಶನಿವಾರ, 26 ಅಕ್ಟೋಬರ್ 2024 (14:21 IST)
ಬೆಂಗಳೂರು: ವಿಜಯಪುರದ ಕೆಲವು ಗ್ರಾಮದ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಗೃಹಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರ ಜಿಲ್ಲೆಯ ಹೊನವಾಡದಲ್ಲಿ ಕೆಲವು ರೈತರಿಗೆ ವಕ್ಫ್ ಬೋರ್ಡ್ ತನ್ನ ಆಸ್ತಿ ಎಂದು ನೋಟಿಸ್ ನೀಡಿದೆ. ಇದರ ಬಗ್ಗೆ ಉತ್ತರಿಸಲು ಎರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ಇದು ಅಲ್ಲಿನ ರೈತರನ್ನು ಕಂಗಾಲು ಮಾಡಿದೆ. ಇಷ್ಟು ದಿನ ಉಳುಮೆ ಮಾಡಿದ್ದ ಜಮೀನು ವಕ್ಫ್ ಬೋರ್ಡ್ ತನ್ನದೆಂದು ನೋಟಿಸ್ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್, ‘ವಕ್ಫ್ ಬೋರ್ಡ್ ನೀಡಿದ ನೋಟಿಸ್ ಬಗ್ಗೆ ಎಲ್ಲಾ ಪರಿಶೀಲನೆ ಮಾಡುತ್ತೇವೆ. ಸರ್ಕಾರ, ಕಂದಾಯ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಲಿದೆ. ಪರಿಶೀಲನೆ ಮಾಡಿ ಅದರಲ್ಲಿ ಹಳೆಯ ರೆಕಾರ್ಡ್ ಗಳೇನಿದೆ ಅದರ ಆಧಾರದ ಮೇಲೆ ನಿರ್ಧಾರ ಮಾಡುತ್ತಾರೆ. ನೋಟಿಸ್ ಕೊಟ್ಟಿದ್ದು ಇರಬಹುದು, ಅದರದ್ದು ಏನೂ ತೊಂದರೆಯಿಲ್ಲ’ ಎಂದಿದ್ದಾರೆ.

ವಿಜಯಪುರದಲ್ಲಿ ಸುಮಾರು 15 ಸಾವಿರ ಎಕರೆ ತನಗೆ ಸೇರಿದ್ದು ಎಂದು ವಕ್ಫ್ ಬೋರ್ಡ್ ಅವಕಾಶ ಮಂಡಿಸುತ್ತಿದೆ. ಈ ಬಗ್ಗೆ ಕೆಲವರು ರೈತರಿಗೆ ಈಗಾಗಲೇ ನೋಟಿಸ್ ಕೂಡಾ ನೀಡಲಾಗಿದೆ. ಇದರ ಬಗ್ಗೆ ಸಾಕಷ್ಟು ಆಕ್ರೋಶ ಕೇಳಿಬಂದಿದೆ. ಸಂಸದ ತೇಜಸ್ವಿ ಸೂರ್ಯ ಕೂಡಾ ಈ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments