Webdunia - Bharat's app for daily news and videos

Install App

ಎಲ್ಲರಿಗೂ ಅಲ್ಲ, ಇಂತಹವರಿಗೆ ಮಾತ್ರ ಇನ್ಮುಂದೆ ಗ್ಯಾರಂಟಿ ಯೋಜನೆ ಸಿಗಬೇಕು: ಜಿ ಪರಮೇಶ್ವರ್

Krishnaveni K
ಮಂಗಳವಾರ, 25 ಫೆಬ್ರವರಿ 2025 (11:14 IST)
ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಯ ಮೂಲಕವೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಅದುವೇ ಹೊರೆಯಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗೃಹಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದು ಎಲ್ಲರಿಗೂ ಅಲ್ಲ, ಕೇವಲ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ಸಿಗುವಂತಾಗಬೇಕು ಎಂದಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ, ಶಾಸಕರ ಅನುದಾನಕ್ಕೆ ಕತ್ತರಿ ಬಿದ್ದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಆಡಳಿತ ಪಕ್ಷದ ನಾಯಕರೊಳಗೇ ಅಸಮಾಧಾನವಿದೆ.

ಇದರ ನಡುವೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಆಪಾದನೆಗಳಿವೆ.  ಈ ನಡುವೆ ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಮಾನದಂಡವಾಗಿಟ್ಟುಕೊಂಡು ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸಿಗುವಂತಾಗಬೇಕು. ಗ್ಯಾರಂಟಿ ಯೋಜನೆಗಳ ಪುನರ್ ಪರಿಶೀಲಿಸಲು ಸರ್ಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಶ್ರೀಮಂತರು ಫ್ರೀ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇದರ ಬದಲು ಬಡವರಿಗೆ ಯೋಜನೆಯ ಲಾಭ ಸಿಗುವಂತಾಗಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments