ಮನೆಗಳ ಮಾಲೀಕರ ಪರ ನಿಂತ ಸಚಿವ : ಟ್ಯಾಕ್ಸ್ ಏರಿಕೆ ಕೈಬಿಡಲು ಡಿಸಿಗೆ ಸೂಚನೆ

Webdunia
ಗುರುವಾರ, 30 ಏಪ್ರಿಲ್ 2020 (16:12 IST)
ತೆರಿಗೆ ಪರಿಷ್ಕರಣೆ ಕೈಬಿಡುವಂತೆ ಜಿಲ್ಲಾಧಿಕಾರಿಗೆ ಸಚಿವರೊಬ್ಬರು ಸೂಚನೆ ಕೊಟ್ಟಿದ್ದಾರೆ.

ಕೊವಿಡ್-19 ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ ಪರಿಷ್ಕರಣೆಯನ್ನು ಕೈಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಶೇ. 30ರಷ್ಟು ತೆರಿಗೆ ಪರಿಷ್ಕರಿಸುವುದು ನಿರಂತರವಾಗಿ ನಡೆದು ಬಂದಿದೆ. ಅದರಂತೆ ಏಪ್ರಿಲ್ 1 ರಿಂದ ಉತ್ತರಕನ್ನಡವೂ ಸೇರಿದಂತೆ ಇಡೀ ರಾಜ್ಯದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ತೆರಿಗೆ ಪರಿಷ್ಕರಿಸುವ ಕ್ರಮ ಜಾರಿಯಾಗಿತ್ತು.

ಆದರೆ ಕೊವಿಡ್-19 ಮುಂಜಾಗೃತಾ ಕ್ರಮವಾಗಿ ಎಲ್ಲೆಡೆ ಲಾಕ್‌ಡೌನ್ ಘೋಷಿಸಲಾಗಿದೆ. ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದವರೂ ತೊಂದರೆಯಲ್ಲಿದ್ದಾರೆ.  ಹೀಗಾಗಿ ಸ್ಥಳೀಯ ಸಂಸ್ಥೆಗಳು ತೆರಿಗೆ ಪರಿಷ್ಕರಣೆಯನ್ನು ಮುಂದೂಡುವಂತೆ ಸಚಿವ ಹೆಬ್ಬಾರ್,  ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments