ಮಹಾಲಕ್ಷ್ಮೀ ಹತ್ಯೆ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಗೃಹಮಂತ್ರಿ ಪರಮೇಶ್ವರ್‌

Sampriya
ಬುಧವಾರ, 25 ಸೆಪ್ಟಂಬರ್ 2024 (18:27 IST)
Photo Courtesy X
ಬೆಂಗಳೂರು: ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ, 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಲಾಗಿತ್ತು. ಈ ಪ್ರಕರಣ ದೆಹಲಿಯ ಶ್ರದ್ಧಾ ವಾಕರ್ ಕೊಲೆ ಮಾದರಿಯಲ್ಲೇ ನಡೆದಿದ್ದು, ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಪ್ರಕರಣದ ತನಿಖೆಯನ್ನು ಚುರುಕುಮಾಡಿದ್ದು, ಇದೀಗ ಹತ್ಯೆ ನಂತರ ಆರೋಪಿಗಳು ಒಡಿಶಾದಲ್ಲಿ ತರೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಮೂರ್ನಾಲ್ಕು ಪೊಲೀಸ್ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಆರೋಪಿ ತಾನು ಇರುವ ಸ್ಥಳಗಳನ್ನು ಬದಲಾಯಿಸುತ್ತಿದ್ದಾನೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ಈಗಾಗಲೇ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸಿಕ್ಕಾ ಮಾಹಿತಿ ಪ್ರಕಾರ ಒಡಿಶಾದಲ್ಲಿ ತಲೆಮರೆಸಿಕೊಂಡಿರುವ  ಆರೋಪಿ ಈ ಕೃತ್ಯ ಎಸಗಿರುವ ಅನುಮಾನವಿದೆ. ಹೀಗಾಗಿ ಆತನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments