Webdunia - Bharat's app for daily news and videos

Install App

ಆಪರೇಷನ್ ಆಡಿಯೋ ಪ್ರಕರಣ ಗಂಭೀರ ಎಂದ ಗೃಹ ಸಚಿವ

Webdunia
ಶನಿವಾರ, 23 ಫೆಬ್ರವರಿ 2019 (17:04 IST)
ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ ತನಿಖಾ ತಂಡ ರಚನೆ ಒಂದಷ್ಟು ವಿಳಂಬವಾಗುತ್ತಿದೆ. ಹಾಗೆಂದು ಸರ್ಕಾರ ಪ್ರಕರಣವನ್ನು ಹಗುರವಾಗಿ ಪರಿಗಣಿದೆ ಎಂದರ್ಥವಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ತನಿಖೆಗೆ ಸೂಕ್ತ ತಂಡವನ್ನು ಸಿದ್ಧತೆ ಮಾಡುತ್ತಿದೆ. ಎಸ್.ಐ.ಟಿ. ತನಿಖೆಗೆ ಮುಖ್ಯಮಂತ್ರಿ ನಿರಾಸಕ್ತಿ ಎಂಬ ವಿಚಾರ ಆಧಾರ ರಹಿತವಾದದ್ದು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಒಪ್ಪಿ ಎಸ್.ಐ.ಟಿ. ತನಿಖೆಗೆ ಆದೇಶಿಸಿದ್ದಾರೆ. ಎಸ್.ಐ.ಟಿ.ಗೆ. ಸಿಎಂ ವಿರೋಧ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದರು. ಅಪರೇಷನ್ ಆಡಿಯೋ ಘಟನೆಗೆ ಸಂಬಂಧಿಸಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣದ ತನಿಖೆಗೆ ಕಲಬುರ್ಗಿ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆಯಜ್ಞೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ, ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿರುವುದಕ್ಕೂ ಎಸ್.ಐ.ಟಿ. ತನಿಖೆಗೂ ಸಂಬಂಧವಿಲ್ಲ. ಎಸ್.ಐ.ಟಿ. ತನಿಖೆಯೇ ಬೇರೆಯಾಗಿದೆ. ಶೀಘ್ರವೇ ಎಸ್.ಐ.ಟಿ. ತನಿಖೆ ಪ್ರಾರಂಭಗೊಳ್ಳಲಿದೆ ಎಂದರು. ಯಡಿಯೂರಪ್ಪ ಅವರು ಅಪರೇಷನ್ ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ.

ಅಲ್ಲದೆ ಹೈಕೋರ್ಟ್ ನಲ್ಲಿ ಅವರ ಪರ ವಕೀಲರು 10 ಕೋಟಿ ರೂಪಾಯಿ ಲಂಚವಲ್ಲ, ಚುನಾವಣೆ ಖರ್ಚಿಗಾಗಿ ಎಂದು ಹೇಳಿದ್ದಾರೆ. ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ 25 ವೆಚ್ಚದ ಮಿತಿ ಹಾಕಿದೆ. ಹೀಗಿರಬೇಕಾದರೆ 10 ಕೋಟಿ ರೂಪಾಯಿ ಚುನಾವಣಾ ವೆಚ್ಚಕ್ಕಾಗಿ ಮುಂಗಡವಾಗಿ ಕೊಡುತ್ತಾರೆ ಎಂದರೆ ಅದರರ್ಥ ಉಳಿದ 9.75 ಕೋಟಿ ರೂಪಾಯಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಒಡ್ಡಿದ ಆಮಿಷದ ಹಣ ಎಂದು ಪಾಟೀಲ ಅಭಿಪ್ರಾಯಪಟ್ಟರು. ನ್ಯಾಯಾಲಯದ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ವಿಚಾರಣೆ ನಡೆಸಲಿದೆ ಎಂದರು. 



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments