Webdunia - Bharat's app for daily news and videos

Install App

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

Krishnaveni K
ಸೋಮವಾರ, 18 ಆಗಸ್ಟ್ 2025 (11:08 IST)
ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಎಸ್ಐಟಿ ಈಗ ತಾತ್ಕಾಲಿಕ ಬ್ರೇಕ್ ಕೊಟ್ಟಿದೆ. ಆದರೆ ಇಂದು ಗೃಹಸಚಿವ ಜಿ ಪರಮೇಶ್ವರ್ ಅಧಿವೇಶನದಲ್ಲಿ ಎಸ್ಐಟಿ ತನಿಖೆ ಬಗ್ಗೆ ಮಾತನಾಡಲಿದ್ದು, ಇದರ ಬಗ್ಗೆ ಏನು ಹೇಳಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಧರ್ಮಸ್ಥಳ ಪ್ರಕರಣ ಈಗ ರಾಜಕೀಯವಾಗಿಯೂ ಭಾರೀ ಸದ್ದು ಮಾಡುತ್ತಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರಲ್ಲಿ ಎಡಪಕ್ಷಗಳ ಹುನ್ನಾರವಿದೆ ಎಂದು ಬಿಜೆಪಿ ಆರೋಪಿಸಿದ್ದು ನಿನ್ನೆ ಧರ್ಮಸ್ಥಳ ಚಲೋ ಯಾತ್ರೆ ನಡೆಸಿತ್ತು.

ಇದೀಗ ಮುಸುಕುಧಾರಿಯ ಬಗ್ಗೆಯೇ ತನಿಖೆ ನಡೆಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಇಂದು ಗೃಹಸಚಿವ ಡಾ ಜಿ ಪರಮೇಶ್ವರ್ ಸದನದಲ್ಲಿ ಎಸ್ಐಟಿ ತನಿಖೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈಗಾಗಲೇ ಅವರು ಎಸ್ಐಟಿ ತಂಡದಿಂದ ವರದಿ ಪಡೆದಿದ್ದಾರೆ.

ಹೀಗಾಗಿ ಈಗ ಎಸ್ಐಟಿ ತನಿಖೆ ಎಲ್ಲಿಗೆ ಬಂದು ತಲುಪಿದೆ? ಇದಕ್ಕೆ ಬ್ರೇಕ್ ಬೀಳುತ್ತಾ? ದೂರು ಕೊಟ್ಟವರನ್ನೇ ತನಿಖೆ ನಡೆಸಲಾಗುತ್ತದೆಯೇ ಎಂಬಿತ್ಯಾದಿ ಮಾಹಿತಿಗಳನ್ನು ಅವರು ಇಂದು ಸದನದಲ್ಲಿಹೇಳುವ ಸಾಧ್ಯತೆಯಿದೆ. ಹೀಗಾಗಿ ಇಂದು ಅವರ ಮಾತಿಗಾಗಿ ಎಲ್ಲರೂ ಕುತೂಹಲದಿಂದ ಎದಿರು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಸ್ವಾತಂತ್ರ್ಯ ಹೋರಾಟಗಾರರಿಗೂ ದುಡ್ಡಿಲ್ಲ ಎನ್ನಲು ನಾಚಿಕೆಯಾಗಲ್ವಾ: ಆರ್ ಅಶೋಕ್

ಕಳ್ಳರನ್ನು ಓಡಿಸಿ ಎಂದು ಭರ್ಜರಿ ಭಾಷಣ ಮಾಡಿದ ಲಾಲೂ ಯಾದವ್: ಹೇಳಲು ತಕ್ಕ ವ್ಯಕ್ತಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments