Webdunia - Bharat's app for daily news and videos

Install App

ರಮಾನಾಥ್ ರೈ ಬದಲಿಗೆ ರಾಮಲಿಂಗಾರೆಡ್ಡಿಗೆ ಗೃಹಖಾತೆ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (19:06 IST)
ಗೃಹಖಾತೆಯನ್ನು ರಮಾನಾಥ್ ರೈಗೆ ನೀಡಲಾಗುತ್ತಿದೆ ಎನ್ನುವ ವರದಿಗಳ ನಡುವೆಯೇ ಕೊನೆಯ ಗಳಿಗೆಯಲ್ಲಿ ತೀರ್ಮಾನ ಬದಲಿಸಿದ ಸಿಎಂ ಸಿದ್ದರಾಮಯ್ಯ ಗೃಹಖಾತೆಯನ್ನು ರಾಮಲಿಂಗಾರೆಡ್ಡಿಯವರಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ.ವರ ಖಾತೆ ಬದಲಾಯಿಸಿದ ಸಿಎಂ, ಇದೀಗ ಗೃಹ ಖಾತೆ ನೀಡಿ ಮುಂಬಡ್ತಿ ನೀಡಿದ್ದಾರೆ.
 
ಮೊದಲಿನಿಂದಲೂ ಗೃಹ ಖಾತೆಯನ್ನು ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ನೀಡಬೇಕು ಎನ್ನುವುದು ಸಿಎಂ ನಿರ್ಧಾರವಾಗಿತ್ತು. ಆದರೆ, ಒಲ್ಲದ ಮನಸ್ಸಿನಿಂದ ಕೊನೆಯ ಗಳಿಗೆಯಲ್ಲಿ ನಿರ್ಧಾರ ಬದಲಿಸಿ ರಾಮಲಿಂಗಾರೆಡ್ಡಿಗೆ ನೀಡಿದ್ದಾರೆ.
 
ಗೃಹ ಖಾತೆಯನ್ನು ರಮಾನಾಥ್ ರೈ ಗೆ ನೀಡಿದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿತ್ತು.
 
ಚುನಾವಣೆ ವರ್ಷವಾಗಿದ್ದರಿಂದ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎನ್ನುವ ಅಂಶವನ್ನು ಪರಿಗಣಿಸಿ ಗೃಹ ಖಾತೆಯನ್ನು ರಾಮಲಿಂಗಾರೆಡ್ಡಿಯವರಿಗೆ ವಹಿಸಿ ಸಿಎಂ ಸಿದ್ದರಾಮಯ್ಯ ಚಾಣಾಕ್ಷತನ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments