Webdunia - Bharat's app for daily news and videos

Install App

ಗಣೇಶ ಪೂಜೆಗೆ ತೆರಳಿದ್ದ ವೇಳೆ ಹಾಡುಹಗಲೇ ಮನೆ ಕಳ್ಳತನ

Webdunia
ಶನಿವಾರ, 15 ಸೆಪ್ಟಂಬರ್ 2018 (14:00 IST)
ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ  ನಡೆದಿದೆ.

ಭಟ್ಕಳ ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದುದರಿಂದ  ಯಾರೋ ಇದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ 20 ಸಾವಿರ ನಗದು ಹಾಗೂ 10 ಗ್ರಾಮ್ ಉಂಗುರ, ಸರ, ಬಳೆ ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನದ ಆಭರಣ ದೋಚಲಾಗಿದೆ. ಸ್ಥಳಕ್ಕೆ ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭಟ್ಕಳ ಸಿಪಿಐ ಕೆ.ಎಲ್.ಗಣೇಶ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments