Webdunia - Bharat's app for daily news and videos

Install App

ಗಣೇಶ ಪೂಜೆಗೆ ತೆರಳಿದ್ದ ವೇಳೆ ಹಾಡುಹಗಲೇ ಮನೆ ಕಳ್ಳತನ

Webdunia
ಶನಿವಾರ, 15 ಸೆಪ್ಟಂಬರ್ 2018 (14:00 IST)
ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ  ನಡೆದಿದೆ.

ಭಟ್ಕಳ ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದುದರಿಂದ  ಯಾರೋ ಇದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ 20 ಸಾವಿರ ನಗದು ಹಾಗೂ 10 ಗ್ರಾಮ್ ಉಂಗುರ, ಸರ, ಬಳೆ ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನದ ಆಭರಣ ದೋಚಲಾಗಿದೆ. ಸ್ಥಳಕ್ಕೆ ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭಟ್ಕಳ ಸಿಪಿಐ ಕೆ.ಎಲ್.ಗಣೇಶ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments