ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಶಾಲೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (16:33 IST)
ಪಾಲಿಕೆ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ವಂಚಿತವಾಗಿರುವ ಕೊಳಗೇರಿ ಹಾಗೂ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬಿಬಿಎಂಪಿ ರೂಪಿಸಿರುವ 'ಸ್ಕೂಲ್‌ ಆನ್‌ ವೀಲ್ಹ್‌' (ಮನೆ ಬಾಗಿಲಿಗೆ ಶಾಲೆ) ಯೋಜನೆಯ ಪ್ರಾಯೋಗಿಕ ಜಾರಿಗೆ ಸಿದ್ಧತೆ ನಡೆಸಿದೆ.
 
ಶಿಕ್ಷಣದಿಂದ ವಂಚಿತವಾಗಿರುವ ಹಾಗೂ ಶಾಲೆಯನ್ನು ತೊರೆದಿರುವ 6ರಿಂದ 14 ವರ್ಷದೊಳಗಿನ ಕೊಳಗೇರಿ(Slum) ಮತ್ತು ವಲಸಿಗರ ಮಕ್ಕಳಿಗೆ(Children) ಸಂಚಾರಿ ವಾಹನದಲ್ಲಿ ಶಿಕ್ಷಣ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಮೊದಲಿಗೆ ರಾಜರಾಜೇಶ್ವರಿ ನಗರ ವಲಯದ ದೊಡ್ಡಗೊಲ್ಲರಹಟ್ಟಿಹಾಗೂ ದಕ್ಷಿಣ ವಲಯದ ಹೊಸಕೆರೆಹಳ್ಳಿ ಕೊಳಗೇರಿಯನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ.
 
ಕಳೆದ ಏಪ್ರಿಲ್‌ನಲ್ಲೇ ಪಾಲಿಕೆ ಈ ಯೋಜನೆ ರೂಪಿಸಿತ್ತು. ಆದರೆ, ರಾಜ್ಯ ಸರ್ಕಾರ ಕೊರೋನಾ(Coronavirus) ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ಪುನರಾರಂಭಕ್ಕೆ ಅನುಮತಿಸದ ಹಿನ್ನೆಲೆಯಲ್ಲಿ ಸ್ಥಗಿತವಾಗಿತ್ತು. ಇದೀಗ ಕೊರೋನಾ ಸೋಂಕು ಬಹುತೇಕ ತಗ್ಗಿರುವುದರಿಂದ ರಾಜ್ಯ ಸರ್ಕಾರ ದಸರಾ ಬಳಿಕ ಪ್ರಾಥಮಿಕ ಶಾಲೆ(School) ಪುನರ್‌ ಆರಂಭಕ್ಕೆ ಅನುಮತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಮನೆ ಬಾಗಿಲಿಗೆ ಶಾಲೆ ಪ್ರಾಯೋಗಿಕ ಜಾರಿಗೆ ಸಿದ್ಧತೆ ನಡೆಸಲಾಗಿದೆ ಎಂದು ಪಾಲಿಕೆ ಶಿಕ್ಷಣ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದರು.
 
ರಾಜ್ಯದ 7 ಸ್ಥಳಕ್ಕೆ ಪ್ರವಾಸ ಬರ್ತಾರೆ ಹೊರ ರಾಜ್ಯದ ಮಕ್ಕಳು..!
 
ಸಾಧಕ-ಬಾಧಕ ಅಧ್ಯಯನ:
 
ರಾಜ್ಯ ಸರ್ಕಾರದ ಅನುಮತಿ ಸಿಕ್ಕ ತಕ್ಷಣ ರಾಜರಾಜೇಶ್ವರಿ ನಗರ ವಲಯದ ದೊಡ್ಡಗೊಲ್ಲರಹಟ್ಟಿಹಾಗೂ ದಕ್ಷಿಣ ವಲಯದ ಹೊಸಕೆರೆಹಳ್ಳಿ ಕೊಳಗೇರಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಆರಂಭಿಸಲು ತೀರ್ಮಾನಿಸಲಾಗಿದೆ. ಈ ಪ್ರಾಯೋಗಿಕ ಅವಧಿಯಲ್ಲಿ ಎದುರಾಗುವ ಸಾಧಕ-ಬಾಧಕ ಅಧ್ಯಯನ ನಡೆಸಿ ಸರಿಪಡಿಸುವುದರ ಜತೆಗೆ ಹೊಸ ಸಾಧ್ಯತೆಗಳ ಬಗ್ಗೆಯೂ ಯೋಚಿಸಲಾಗುವುದು. ಬಳಿಕ ಇತರೆ ಇತರೆ ವಲಯಗಳಿಗೂ ಈ ಮನೆ ಬಾಗಿಲಿಗೆ ಶಾಲೆ ಯೋಜನೆ ವಿಸ್ತರಿಸುವುದಾಗಿ ಹೇಳಿದರು.
 
10 ಸಂಚಾರಿ ಶಾಲೆ ಸಿದ್ಧ
 
ಕೊಳಗೇರಿ ಹಾಗೂ ವಲಸಿಗರುವ ಸ್ಥಳಗಳಿಗೆ ತೆರಳಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪಾಲಿಕೆ .40 ಲಕ್ಷ ವೆಚ್ಚದಲ್ಲಿ ಬಿಎಂಟಿಸಿಯಿಂದ 10 ಬಸ್‌ ಖರೀದಿಸಿದೆ. ಈ ಬಸ್‌ಗಳಲ್ಲಿ ಆಸನಗಳನ್ನು ಕಳಚಿ ಶಾಲಾ ಕೊಠಡಿಯ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಬಸ್‌ಗಳಲ್ಲಿ ಬೋರ್ಡ್‌, ಮಕ್ಕಳ ಸ್ನೇಹಿ ಚಿತ್ರಗಳು, ಕುಡಿಯುವ ನೀರಿನ ವ್ಯವಸ್ಥೆ, ಲೇಖನ ಸಾಮಗ್ರಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಪಾಠಗಳು ನಡೆಯಲಿವೆ. ಒಂದು ಸಂಚಾರಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಹಾಗೂ ಆಯಾ ಸೇರಿ ಮೂವರು ಸಿಬ್ಬಂದಿ ಇರಲ್ಲಿದ್ದಾರೆ. ಸದ್ಯಕ್ಕೆ ಈ 10 ಬಸ್‌ಗಳನ್ನು ಪಾಲಿಕೆ ಆವರಣದಲ್ಲಿ ನಿಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments