ಉಕ್ರೇನ್‌ನಿಂದ ಮನೆ ತಲುಪಿದ ವಿದ್ಯಾರ್ಥಿಗಳು

Webdunia
ಭಾನುವಾರ, 27 ಫೆಬ್ರವರಿ 2022 (18:36 IST)
ಉಕ್ರೇನ್- ರಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ ತಲುಪಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಇನ್ನೂ ಪೂರ್ವ ಯೂರೋಪಿಯನ್ ದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದು, ಸುರಕ್ಷಿತವಾಗಿ ಮನೆ ತಲುಪುವುದನ್ನು ಎದುರು ನೋಡುತ್ತಿದ್ದಾರೆ.
2ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮನು ಡಿ.ಎಸ್ ಅವರು ಚೆನ್‌ವಿಸಿ ಎಂಬಲ್ಲಿನ ಬುಕೊವಿನಾ ಸ್ಟೇಟ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯಾಗಿದ್ದರು. ಜತೆಗೆ ಸುದೀಪ್ ಪಾಟೀಲ್ ಕೂಡಾ ದಾವಣಗೆರೆ ಜಿಲ್ಲೆಯವರಾಗಿದ್ದು, ಇಬ್ಬರೂ ಮನೆ ತಲುಪಿದ್ದಾರೆ. ಚೆರ್ನ್‌ವಿಸಿಯಿಂದ ಕೀವ್ ವರೆಗೆ ರೈಲಿನಲ್ಲಿ ಬಂದು ಬಳಿಕ ಭಾರತಕ್ಕೆ ವಾಪಸ್ಸಾಗಿದ್ದಾಗಿ ಅವರು ಹೇಳಿದ್ದಾರೆ.
ಉಕ್ರೇನ್ ರಾಜಧಾನಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದಾಗಿ ಅವರು ವಿವರಿಸಿದ್ದಾರೆ. "ನಮ್ಮ ವಿವಿ ಪೂರ್ವ ಉಕ್ರೇನ್‌ನಲ್ಲಿ ಇದ್ದ ಕಾರಣದಿಂದ ಉದಯ ಯುದ್ಧ ಪ್ರದೇಶದಿಂದ ದೂರದ ಸ್ಥಳ. ಆದ್ದರಿಂದ ಸುರಕ್ಷಿತವಾಗಿ ಕೀವ್‌ಗೆ ತಲುಪಲು ಸಾಧ್ಯವಾಯಿತು" ಎಂದು ಮನು ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಇತರ ಮೂವರು ವಿದ್ಯಾರ್ಥಿಗಳಾದ ಸಯೀದಾ ಹಬೀಬಾ, ಹಬೀದ್ ಅಲಿ ಮತ್ತು ಪ್ರಿಯಾ ಭಾರತಕ್ಕೆ ಆಗಮಿಸುವ ಮಾರ್ಗಮಧ್ಯದಲ್ಲಿದ್ದಾರೆ ಎನ್ನಲಾಗಿದೆ. "ಕೀವ್ ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಅವರು ಬಸ್ಸಿನಲ್ಲಿ ನೆರೆಯ ರೊಮಾನಿಯಾಗೆ ಆಗಮಿಸಿದ್ದಾರೆ. ರೊಮಾನಿಯಾದಿಂದ ಮುಂಬೈಗೆ ಬರುವ ವಿಮಾನದಲ್ಲಿ ಆಗಮಿಸುತ್ತಿರುವುದಾಗಿ ಮನು ಹೇಳಿದ್ದಾರೆ.
ವಿಜಾಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಇರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದ್ದಾರೆ. ಈ ಪೈಕಿ ಸ್ನೇಹಾ ಪಾಟೀಲ್ ಎಂಬ ವಿದ್ಯಾರ್ಥಿನಿ ದೆಹಲಿಗೆ ಬಂದಿರುವುದಾಗಿ ವರದಿಯಾಗಿದೆ. ಉಕ್ರೇನ್‌ನಿಂದ ವಿಮಾನ ದರವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕರು ದೂರಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಉಕ್ರೇನ್‌ನಲ್ಲೇ ಉಳಿಯುವಂತಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments