ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆಗೆ ಸೂಚನೆ

Sampriya
ಭಾನುವಾರ, 9 ನವೆಂಬರ್ 2025 (12:23 IST)
Photo Credit X
ಬೆಂಗಳೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ. ಖಂಡ್ರೆ ತಿಳಿಸಿದ್ದಾರೆ. 

ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿ.ಎನ್.ಎ. ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.  

ಬಂಡೀಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳ ಜೊತೆಗೆ ಇತರ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ಹುಲಿ ಸೆರೆ ಕಾರ್ಯಾಚರಣೆಲ್ಲಿ ಭಾಗಿಯಾಗಿ ಹುಲಿಯನ್ನು ಹಿಡಿದಿದ್ದಾರೆ. ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಗಂಡು ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಈಶ್ವರ ಖಂಡ್ರೆ ವಿವರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments