ಸದ್ದಿಲ್ಲದೆ ಪಸರಿಸುತ್ತಿದೆ ಜೇನಿನ ಝೇಂಕಾರ

Webdunia
ಶುಕ್ರವಾರ, 31 ಆಗಸ್ಟ್ 2018 (17:36 IST)
ಜೇನು ಕೃಷಿಯ ಜನಪ್ರಿಯತೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ಸದ್ದಿಲ್ಲದೆ ಪಸರಿಸುತ್ತಿದೆ ಜೇನಿನ ಝೇಂಕಾರ. ಸ್ನೇಹಿತನ ಹೊಲದಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಜೇನು ಪರಾಗ ಸ್ಪರ್ಷದಿಂದಾಗಿ ಸ್ನೇಹಿತನ ಹೊಲದ ಸೂರ್ಯಕಾಂತಿ ಬೆಳೆಯಲ್ಲಿ ಶೇ.35ಕ್ಕಿಂತ ಅಧಿಕ ಇಳುವರಿಯನ್ನು ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ.

ಕೊಪ್ಪಳ ತಾಲೂಕಿನ ಡಂಬ್ರಳ್ಳಿಯ ಗ್ರಾಮದ ಜೇನು ಕೃಷಿಕ ಆನಂದರಡ್ಡಿ ಅವರು ಜೇನು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ.
ಜೇನು ಎಂದೊಡನೆ ಎಲ್ಲರಿಗೂ ಬಾಯಲ್ಲಿ ನೀರೂರುವುದು ಸಹಜ. ಆದರೆ ಜೇನು ಸಾಕಾಣಿಕೆ ಎಂದೊಡನೆ ದೂರ ಸರಿಯುವವರೆ ಬಹಳ. ಹೀಗಿರುವಾಗ ಜೇನು ಕೃಷಿ ಮಾಡಿ ಅದರ ಲಾಭ ಪಡೆಯುವವರು ಬಹಳ ವಿರಳ. ಇದಕ್ಕೆ ಅಪವಾದವೆಂಬಂತೆ ಕೊಪ್ಪಳ ಜಿಲ್ಲೆಯ ಕೆಲ ರೈತರು ಜೇನುಕೃಷಿ ಮಾಡಿ ಅದರ ಲಾಭ ಪಡೆಯುತ್ತಿದ್ದಾರೆ. ಕೊಪ್ಪಳ ತಾಲೂಕಿನ ಡಂಬ್ರಳ್ಳಿಯ ಪ್ರಗತಿಪರ ರೈತ ಆನಂದರಡ್ಡಿ ಇಂತಹ ಒಬ್ಬ ಅಪರೂಪದ ರೈತ. ಹತ್ತಾರು ಜೇನು ಪೆಟ್ಟಿಗೆಗಳನ್ನಿಟ್ಟು ಸಲಹುತ್ತ ಅದನ್ನು ತನ್ನ ಸ್ನೇಹಿತರ ಹೊಲಗಳಲ್ಲಿಟ್ಟು ತಾವೇ ಅವುಗಳನ್ನು ಸಲುಹಿ ಆ ರೈತರಿಗೆ ಜೇನಿನ ಮಹತ್ವ ಮತ್ತು ಅವುಗಳ ಪರಾಗ ಸ್ಪರ್ಶದಿಂದ ಆಗುವ ಲಾಭವನ್ನು ಪರಿಚಯಿಸುತ್ತಿರುವುದು ಅವರ ಹೆಗ್ಗಳಿಕೆ. 

ಜೇನು ಕೃಷಿಕ ಆನಂದರಡ್ಡಿ ಅವರು ಇತ್ತೀಚೆಗೆ ತಮ್ಮ ಜೇನು ಪೆಟ್ಟಿಗೆಗಳನ್ನು ತಮ್ಮ ಸ್ನೇಹಿತ ಭೂಮರೆಡ್ಡಿಯವರ ಸೂರ್ಯಕಾಂತಿ ಹೊಲದಲ್ಲಿ ಇರಿಸಿದಾಗ ಅದರ ಇಳುವರಿ ಶೇ.35ಕ್ಕಿಂತ ಅಧಿಕವಾಗಿರುವುದು ಕಂಡುಬಂದಿದೆ. ಅಲ್ಲದೇ ಸುತ್ತಲಿನ ಇನ್ನೂ 4-5 ರೈತರು ಈ ಜೇನು ಪರಾಗ ಸ್ಪರ್ಷದ ಫಲಾನುಭವಿಗಳಾಗಿದ್ದಾರೆ. ಸೂರ್ಯಕಾಂತಿ ಕಟಾವಿಗೆ ಬಂದಿರುವುದರಿಂದ ಈಗ ತಮ್ಮದೇ ಬಾಳೆ ಹೊಲಕ್ಕೆ ಪೆಟ್ಟಿಗೆಗಳನ್ನು ವರ್ಗಾಯಿಸಿರುವುದು ಈಗಲೂ ಕಾಣಲು ಸಿಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಮುಂದಿನ ಸುದ್ದಿ
Show comments