Select Your Language

Notifications

webdunia
webdunia
webdunia
webdunia

ಪ್ರಾರ್ಥನೆಯಲ್ಲಿ ನಿರತರಾಗಿದ್ದ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ: 19 ಮಕ್ಕಳಿಗೆ ಗಾಯ

ಪ್ರಾರ್ಥನೆಯಲ್ಲಿ ನಿರತರಾಗಿದ್ದ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ: 19 ಮಕ್ಕಳಿಗೆ ಗಾಯ
ಹಾಸನ , ಶನಿವಾರ, 3 ಅಕ್ಟೋಬರ್ 2015 (14:33 IST)
ಶಾಲೆಯಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಪರಿಣಾಮ 19 ಮಂದಿ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಎಂಬ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 
 
ಇಂದು ಬೆಳಗ್ಗೆ ಪ್ರಾರ್ಥನೆಯಲ್ಲಿ ತೊಡಗಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ್ದು, ಒಟ್ಟು 19 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಮಕ್ಕಳನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
 
ಇನ್ನು ಘಟನೆಯ ಮಾಹಿತಿಯನ್ನು ತಾಲೂಕಿನ ತಹಶಿಲ್ದಾರ್ ಅವರಿಗೆ ತಿಳಿಸಲಾಗಿದ್ದು, ತಹಶಿಲ್ದಾರ್ ಪ್ರಸ್ತುತ ಮಕ್ಕಳ ಸ್ಥಿತಿ-ಗತಿ ಬಗ್ಗೆ ವಿಚಾರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. 

Share this Story:

Follow Webdunia kannada