ಹಲೋ ಎಂದರೇ "ಹನಿ ಟ್ರಾಪ್‌" ಮಾಡುವುದಾ: ಡಿಕೆ ಶಿವಕುಮಾರ್ ಮಾತಿನ ಒಳಾರ್ಥವೇನು

Sampriya
ಶುಕ್ರವಾರ, 21 ಮಾರ್ಚ್ 2025 (21:06 IST)
Photo Courtesy X
ಬೆಂಗಳೂರು: ಹಲೋ ಎಂದರೇ "ಹನಿ ಟ್ರಾಪ್‌" ಮಾಡುವುದಾ. ಡಿಸಿಎಂ ಡಿಕೆ ಶಿವಕುಮಾರ್  ಅವರ ಈ ಮಾತಿನ ಒಳಾರ್ಥ ವೇನು ಎಂದು ಜೆಡಿಎಸ್ ಪ್ರಶ್ನಿಸಿದೆ. ಹಲೋ ಎಂದರೇ "ಹನಿ ಟ್ರಾಪ್‌" ಮಾಡುವುದಾ ?

ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ಯಾರಾದರೂ ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ.  ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ ಎಂದು ಹನಿಟ್ರ್ಯಾಪ್ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಇದೀಗ ಡಿಸಿಎಂ ಹೇಳಿಕೆ ಅರ್ಥವೇನು ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.

ಹಲೋ ಎಂದರೇ "ಹನಿ ಟ್ರಾಪ್‌" ಮಾಡುವುದಾ ?


ಡಿಸಿಎಂ ಡಿಕೆ ಶಿವಕುಮಾರ್‌ ಅವರ ಈ ಮಾತಿನ ಒಳಾರ್ಥ ಏನು ?

"ಮಾಡಿದ್ದುಣ್ಣೋ ಮಹರಾಯ" ಎಂಬ ಮಾತಿನ "ಗೂಡಾರ್ಥ" ಏನನ್ನು ಸೂಚಿಸುತ್ತದೆ.

ಅಂದರೇ ಸಚಿವ ರಾಜಣ್ಣ ಅವರ ಮೇಲೆ "ಹನಿ ಟ್ರಾಪ್‌" ನಡೆದಿರುವುದು ನಿಜ ಎಂಬುದು ಸತ್ಯವೇ ಆಗಿದೆ.

ಉಪಮುಖ್ಯಮಂತ್ರಿಗಳ ಈ ಉಡಾಫೆ, ಸೊಕ್ಕಿನ ಮಾತುಗಳೇ ಅದನ್ನು ಪುಷ್ಟೀಕರಿಸುವಂತಿದೆ.

ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟಹಾಕಲು ಈ ರೀತಿಯ ನೀಚ ಮಟ್ಟಕ್ಕಿಳಿದು ಕೊಳಕು ರಾಜಕಾರಣ ಮಾಡುವುದು ಕಪ್ಪು ಚುಕ್ಕೆ.  

ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೇ ಸಚಿವರ ಮೇಲೆ ನಡೆದಿರುವ "ಹನಿ ಟ್ರಾಪ್‌" ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments