Webdunia - Bharat's app for daily news and videos

Install App

ಬೆಂಗಳೂರಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಯಲು

Webdunia
ಶನಿವಾರ, 1 ಏಪ್ರಿಲ್ 2017 (12:33 IST)
ಬೆಂಗಳೂರಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಯಲಾಗಿದೆ. ಬ್ಯಾಂಕ್ ಮ್ಯಾನೇಜರ್ ಹೆಸರಲ್ಲಿ ಪರಿಚಯ ಮಾಡಿಕೊಂಡು ಬಳಿಕ ಹನಿಟ್ರ್ಯಾಪ್ ಮಾಡಿ 10 ಲಕ್ಷ ರೂ. ಹಣ ಮತ್ತು ಒಡವೆ ದೋಚಿದ್ದ 6 ಮಂದಿಯನ್ನ ಬೆಂಗಳೂರಿಮ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿ ಎಂಬ ಮಹಿಳೆ ನಾನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡು ನಮ್ಮ ಬ್ಯಾಂಕ್`ನಲ್ಲಿ ಅಕೌಂಟ್ ಮಾಡಿಸಿ ಎಂದು ಕೇಳಿದ್ದಾಳೆ. 15 ದಿನಗಳ ಕಾಲ ಫೋನಿನಲ್ಲಿ ಮಾತುಕತೆ ನಡೆಸಿದ್ದಾಳೆ. ಬಳಿಕ ನಿಮ್ಮನ್ನ ಭೇಟಿಯಾಗಬೇಕೆಂದು ಕರೆದಿದ್ದಾರೆ. ಭೇಟಿ ಬಳಿಕ ಊಟಕ್ಕೆಂದು ಕಾರಿನಲ್ಲಿ ಕೂರಿಸಿಕೊಂಡು ಬಿಡದಿಯ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಹಣ ಮತ್ತು ಒಡವೆ ಕಿತ್ತುಕೊಂಡು 10 ಲಕ್ಷ ಬೇಡಿಕೆ ಇಟ್ಟಿದ್ದಾರೆ. ಗಾಬರಿಗೊಂಡ ಉದ್ಯಮಿ ಹಣ ನೀಡಿದ್ದಾನೆ.

ಪ್ರಕರಣ ಕುರಿತಂತೆ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದು, ಇದೀಗ, ಜ್ಯೋತಿ ಸೇರಿ 6 ಮಂದಿಯನ್ನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಮಹೇಶ್, ಮಹಾದೇವಿ, ಜ್ಯೋತಿ, ಬರ್ನು ಅಲಿಯಾಸ್ ಆಶಾ, ಸ್ವಾಮಿ ಬಂಧಿತರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments