Webdunia - Bharat's app for daily news and videos

Install App

ಸಿದ್ದರಾಮಯ್ಯರ ಬಣದವರೇ ಹನಿಟ್ರ್ಯಾಪ್ ಬಗ್ಗೆ ದನಿ ಎತ್ತಿದವರು, ಇದು ಕಾಕತಾಳಿಯವೋ, ರಾಜಕೀಯ ಷಡ್ಯಂತ್ರವೋ

Sampriya
ಗುರುವಾರ, 20 ಮಾರ್ಚ್ 2025 (20:03 IST)
ಬೆಂಗಳೂರು: ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಲೇವಡಿ ಮಾಡಿದ್ದಾರೆ.

ಇಂದು ಸದನದಲ್ಲಿ ಎದ್ದಿರುವ ಹನಿಟ್ರ್ಯಾಪ್ ಪ್ರರಕಣ ಸಂಬಂಧ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ.

ಆರ್‌ ಅಶೋಕ್ ಹಂಚಿಕೊಂಡ ಪೋಸ್ಟ್‌ನಲ್ಲಿ ಏನಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ  ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗು ಸಿ ಮಹಾದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌  ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ್ಗೆ ಬಹಿರಂಗವಾಗಿ ದನಿ ಎತ್ತಿರುವ ಸಚಿವರೆಲ್ಲರೂ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರಿತಿಸಿಕೊಂಡಿರುವವರು ಎನ್ನುವುದು ಕಾಕತಾಳೀಯವೋ ಅಥವಾ ಇದರ ಹಿಂದೆ ರಾಜಕೀಯ ಷಡ್ಯಂತ್ರವೇನಾದರೂ ಇದೆಯೋ?

ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments