Webdunia - Bharat's app for daily news and videos

Install App

ಉದ್ಯಮಿಗೆ ಹನಿ ಟ್ರ್ಯಾಪ್ - ಮೂವರು ಅರೆಸ್ಟ್

Webdunia
ಶುಕ್ರವಾರ, 29 ಡಿಸೆಂಬರ್ 2023 (15:41 IST)
ಹನಿಟ್ರ್ಯಾಪ್‌  ಮೂಲಕ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂ. ದೋಚಿದ್ದ  ಮೂವರು ಆರೋಪಿಗಳನ್ನು ಮೈಸೂರು ಗ್ರಾಮಾಂತರ ಠಾಣೆ  ಪೋಲೀಸರು ಬಂಧಿಸಿದ್ದಾರೆ.ಮಡಿಕೇರಿ ಮೂಲದ ಯುವತಿ, ಜಲುಲ್ಲಾ ರೆಹಮಾನ್ ಮತ್ತು ರಿಜ್ವಾನ್ ಬಂಧಿತ ಆರೋಪಿಗಳು.  ಬಂಧಿತರಿಂದ 50 ಸಾವಿರ ರೂ. ನಗದು, ಕಾರ್ ವಶಕ್ಕೆ ಪಡೆಯಲಾಗಿದೆ.  
 
9 ತಿಂಗಳ ಹಿಂದೆ ಕಳೆದ ಮಾರ್ಚ್ ನಲ್ಲಿ ಪ್ರಕರಣ ನಡೆದಿದ್ದು,  ಕೇರಳ ಮೂಲದ ಉದ್ಯಮಿ ಸುನ್ನಿ ಹನಿಟ್ರ್ಯಾಪ್ ಗೆ ಒಳಗಾದವರು. ಕೇರಳಕ್ಕೆ ತೆರಳುತ್ತಿದ್ದ ಉದ್ಯಮಿಯನ್ನು ಮಾನಂದವಾಡಿ ರಸ್ತೆಯಲ್ಲಿ ತಡೆದಿದ್ದ ಆರೋಪಿಗಳು ಅವರನ್ನು ಅಪಹರಿಸಿ ಮನೆಯೊಂದಕ್ಕೆ ಕರೆದೊಯ್ದಿದ್ದರು. ಬಳಿಕ  ಯುವತಿಯೊಂದಿಗೆ ಅರೆ ನಗ್ನ ಫೋಟೋ, ವಿಡಿಯೋ ತೆಗೆದು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದಲ್ಲಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಬಳಿಕ ಅವರಿಂದ 5 ಲಕ್ಷ ರೂ. ಹಣ ಮತ್ತು  ಉಂಗುರ ಕಸಿದುಕೊಂಡು ಖದೀಮರು ಪರಾರಿಯಾಗಿದ್ದು, ತಿರುನೆಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹನಿ ಟ್ರ್ಯಾಪ್  ಸುನ್ನಿ ದೂರು ದಾಖಲಿಸಿದ್ದರು.ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಯುವತಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ