Webdunia - Bharat's app for daily news and videos

Install App

ಮಹಾನಗರದಲ್ಲಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡ

Webdunia
ಗುರುವಾರ, 4 ನವೆಂಬರ್ 2021 (21:55 IST)
ಬೆಂಗಳೂರು: ಮಹಾನಗರದಲ್ಲಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡವನ್ನು ನಂದಿನಿ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ. ಓರ್ವ ಯುವತಿ ಸೇರಿ ಮುತ್ತು, ಪೆದ್ದರೆಡ್ಡಿ, ದಾಮೋದರ್​​ ಬಂಧಿತ ಆರೋಪಿಗಳು.
ಶಿವರುದ್ರಯ್ಯ ಎಂಬ ನಿವೃತ್ತ ಪ್ರಾಂಶುಪಾಲರು ಬಾರ್​ ಲೈಸೆನ್ಸ್​ ಪಡೆದುಕೊಳ್ಳಲು ಹುಡುಕಾಟ ನಡೆಸುತ್ತಿದ್ದರು. ಈ ಸಮಯದಲ್ಲಿ ಹನಿಟ್ರ್ಯಾಪ್​ ಗ್ಯಾಂಗ್​ನ ಯುವತಿ ಪರಿಚಯವಾಗಿತ್ತು. ತನ್ನ ಪರಿಚಯದವರ ಬಳಿ ಬಾರ್​ ಲೈಸೆನ್ಸ್ ಇದೆ ಎಂದೇಳಿ ಸ್ನೇಹ ಬೆಳಸಿ ಪ್ಲಾನ್​ ರೂಪಿಸಿದ್ದರು. ಬಳಿಕ ಬಾರ್​ ಲೈಸೆನ್ಸ್​​ ವಿಚಾರವಾಗಿ ಮಾತುಕತೆ ನಡೆಸಲು ಯುವತಿ ಶಿವರುದ್ರಯ್ಯರನ್ನು ಮನೆಗೆ ಕರೆಸಿಕೊಂಡಿದ್ದಳು. ಯುವತಿ ಜೊತೆ ಮಾತಾಡುತ್ತಿದ್ದಾಗ ಗ್ಯಾಂಗ್​ನಲ್ಲಿದ್ದ ಇನ್ನಿತರ ಆರೋಪಿಗಳು ಮನೆ ಒಳಗೆ ನುಗ್ಗಿದ್ದರು. ಈ ವೇಳೆ ನಕಲಿ ಪ್ರೆಸ್ ಕಾರ್ಡ್ ತೋರಿಸಿ 5 ಲಕ್ಷಕ್ಕೆ ಬೇಡಿಕೆ ಇಟ್ಟು ಪ್ರಾಂಶುಪಾಲರಿಂದ ಆರೋಪಿಗಳು 3 ಲಕ್ಷ ರೂ. ಹಣ ಪಡೆದಿದ್ದಾರೆ. ನಂತರ ಉಳಿದ ಹಣಕ್ಕಾಗಿ ಗ್ಯಾಂಗ್ ಒತ್ತಾಯಿಸಿತ್ತು.
ಇದರಿಂದ ಬೇಸತ್ತ ಶಿವರುದ್ರಯ್ಯ ನಂದಿನಿ ಲೇಔಟ್​​ ಪೊಲೀಸ್​​ ಠಾಣೆಯಲ್ಲಿ ಹನಿ ಟ್ರ್ಯಾಪ್ ಮಾಡಿರುವುದಾಗಿ​ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಖಾಕಿ ನಾಲ್ವರು ಆರೋಪಿಗಳನ್ನು ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments