Webdunia - Bharat's app for daily news and videos

Install App

ಹನಿಟ್ರ್ಯಾಪ್‌ ಪ್ರಕರಣ: ತನಿಖೆಗೆ ಒತ್ತಾಯಿಸಿ ಗೃಹಮಂತ್ರಿಗೆ ರಾಜಣ್ಣ ನೀಡಿದ ಮನವಿಯಲ್ಲಿ ಏನಿದೆ‌

Sampriya
ಮಂಗಳವಾರ, 25 ಮಾರ್ಚ್ 2025 (18:18 IST)
Photo Courtesy X
ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಗೃಹಮಂತ್ರಿ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರು ಕೊಡುತ್ತೇನೆಂದು ಹೇಳಿದ್ದ ಸಚಿವ ರಾಜಣ್ಣ ಅವರು ಮನವಿ ನೀಡಿದ್ದಾರೆ.

ಸಂಬಂಧಿಸಿದಂತೆ ಸಚಿವ ರಾಜಣ್ಣ ಅವರು ಇಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ದೂರು ನೀಡದೇ ಮನವಿ ಮಾತ್ರ ನೀಡಿದ್ದಾರೆ. ಮನವಿಯಲ್ಲಿ ತಮ್ಮನ್ನು ಹನಿಟ್ರ್ಯಾಪ್‌ಗೆ ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವರು ಮನವಿ ಮಾಡಿದ್ದಾರೆ.

ಇಂದು ಸಂಜೆ  ಪರಮೇಶ್ವರ್‌ ಅವರ ನಿವಾಸಕ್ಕೆ ತೆರಳಿ ಈ ವಿಚಾರದ ಬಗ್ಗೆ  ಚರ್ಚೆ ನಡೆಸಿದರು. ಮನವಿ ಸ್ವೀಕರಿಸಿದ  ಬಳಿಕ ಪರಮೇಶ್ವರ್‌ ಮಾತನಾಡಿ,  ‘ಸದನದಲ್ಲಿ ನಡೆದ ಘಟನೆ ಮತ್ತು ಅದರ ಮುಂದುವರಿದ ಭಾಗವಾಗಿ ನನಗೆ ದೂರು ನೀಡುವುದಾಗಿ ತಿಳಿಸಿದ್ದರು. ಕಾನೂನು ವ್ಯಾಪ್ತಿಯಲ್ಲಿ ನಮಗೆ ಇರುವ ಅವಕಾಶಗಳ ಕುರಿತು ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ನೀಡಿರೋ ಪ್ರತಿಯಲ್ಲಿ ಏನೇಲ್ಲ ಅಂಶಗಳಿದೆ ಅನ್ನೋದನ್ನ ಚರ್ಚೆ ಮಾಡಲು ಆಗುವುದಿಲ್ಲ. ಮನವಿ ಆಧಾರದ ಮೇಲೆ ಏನ್ ಮಾಡಬೇಕು, ಯಾರಿಗೆ ಅದನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments