Select Your Language

Notifications

webdunia
webdunia
webdunia
webdunia

ಸನ್ಮಾನ್ಯ ಮುಖ್ಯಮಂತ್ರಿ ರವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪುತ್ಥಳಿಗೆ ಮಾಲಾರ್ಪಣೆ

ಸನ್ಮಾನ್ಯ ಮುಖ್ಯಮಂತ್ರಿ ರವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪುತ್ಥಳಿಗೆ ಮಾಲಾರ್ಪಣೆ
bangalore , ಗುರುವಾರ, 26 ಜನವರಿ 2023 (16:29 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕ್ರಾಂತಿ ವೀರಣ್ಣ ಸಂಗೊಳ್ಳಿ ರಾಯಣ್ಣ ರವರ ಪ್ರತಿಷ್ಠಾನದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ 192ನೇ ಸ್ಮರಣೋತ್ಸವ ಅಂಗವಾಗಿ ನಗರದ ದೇವರಾಜು ಅರಸು ವೃತ್ತದಲ್ಲಿರುವ ರಾಯಣ್ಣ ರವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಪೌರಾಡಳಿತ ಸಚಿವರಾದ ಎಂ.ಟಿ.ಬಿ ನಾಗರಾಜು, ಮಾಜಿ ಸಚಿವರಾದ ಹೆಚ್.ಎಮ್.ರೇವಣ್ಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯಾದ ಎನ್.ಮಂಜುನಾಥ್ ಪ್ರಸಾದ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ವಲಯ ಆಯುಕ್ತರಾದ ಡಾ. ದೀಪಕ್, ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್‌ನಲ್ಲಿ ಆಹಾರಕ್ಕಾಗಿ ಹೊಡೆದಾಟ