ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಗರದ ಹೊರವಲಯದ ಬಿಎಂ ರಸ್ತೆಯಲ್ಲಿ ಭಾನುವಾರ ನಸುಕಿನ ಜಾವ 2.45ರ ಸುಮಾರಿಗೆ ನಡೆದಿದೆ. ಮೃತರನ್ನು ಕಾರು ಚಾಲಕ ಬೆಂಗಳೂರು ನಿವಾಸಿ ಶಂಕರಮೂರ್ತಿ, ಮಧ್ಯ ಪ್ರದೇಶದ ಜಂಬಲ್ ಪುರದ ನಿವಾಸಿಗಳು(ಉಳಿದ ಮೂವರು) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮತ್ತೋರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಕಾರ್ ಡಿಕ್ಕಿ ಹೊಡೆದಿದ್ದು ಅತಿ ವೇಗದ ಚಾಲನೆ ಘಟನೆಗೆ ಕಾರಣ ಎನ್ನಲಾಗುತ್ತಿದೆ. ನಜ್ಜುಗುಜ್ಜಾಗಿರುವ ಕಾರ್ ಘಟನೆಯ ತೀವ್ರತೆಗೆ ಸಾಕ್ಷಿಯಾಗಿದೆ.
ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹಾಸನ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.