Webdunia - Bharat's app for daily news and videos

Install App

ಸಂದರ್ಶನಕ್ಕೆ ಬಂದವರು ಮಸಣ ಸೇರಿದರು

Webdunia
ಶನಿವಾರ, 30 ಏಪ್ರಿಲ್ 2016 (09:01 IST)
ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು  ಒಟ್ಟು 8 ಜನರು ದುರ್ಮರಣವನ್ನಪ್ಪಿದ್ದಾರೆ. 
 
ರಾಷ್ಟ್ರೀಯ ಹೆದ್ದಾರಿ 150 (ಎ) ನಲ್ಲಿ ಬೆಳಗ್ಗೆ ಸುಮಾರು 4.30 ರ ವೇಳೆಗೆ ಖಾಸಗಿ ಬಸ್‌‌‌, ಸರ್ಕಾರಿ ಬಸ್‌‌ ಮತ್ತು ಕ್ರೂಸರ್‌ ನಡುವೆ ಅಪಘಾತ ಸಂಭವಿಸಿದೆ. ಕೆಎಸ್‌‌ಆರ್‌ಟಿಸಿ ಬಸ್‌‌- ಕ್ರೂಸರ್‌ ಮುಖಾಮುಖಿ‌ ಡಿಕ್ಕಿಯಾಗಿದ್ದು ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್‌ ಸಹ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಕ್ರೂಸರ್ ಬೆಂಗಳೂರಿನಿಂದ ಬಳ್ಳಾರಿಗೆ ವಾಪಸ್ಸಾಗುತ್ತಿದ್ದರೆ, ಸರ್ಕಾರಿ ಬಸ್ ದೇವದುರ್ಗದಿಂದ ಬೆಂಗಳೂರಿನ ಕಡೆ ಸಾಗುತ್ತಿತ್ತು. 
 
ಘಟನೆಯಲ್ಲಿ ಕ್ರೂಸರ್ ಚಾಲಕ ಸೇರಿ 7 ವಿದ್ಯಾರ್ಥಿನಿಯರು ಸೇರಿ 8 ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ಕ್ರೂಸರ್ ಚಾಲಕ ಚಂದ್ರೇಗೌಡ(35), ವಿದ್ಯಾರ್ಥಿನಿಯರಾದ ಶಾಂತಿ (20) , ಸುಧಾ (20), ಜಯಶ್ರೀ (21), ಶೃತಿ (21), ಹರ್ಷಿತಾ(21) ಸರಿತಾ(21), ಭಾರತಿ(21) ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ನಿವಾಸಿಗಳಾಗಿದ್ದಾರೆ. 
 
ವಿದ್ಯಾರ್ಥಿನಿಯರು ಬೆಂಗಳೂರಿನಲ್ಲಿ ಸಂದರ್ಶನ ಮುಗಿಸಿ ಕ್ರೂಸರ್‌‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ವಾಪಸ್ಸಾಗುತ್ತಿದ್ದರು. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments