Select Your Language

Notifications

webdunia
webdunia
webdunia
webdunia

ಭೀಕರ ಅಪಘಾತ: ನಾಲ್ವರ ದುರ್ಮರಣ

ಭೀಕರ ಅಪಘಾತ: ನಾಲ್ವರ ದುರ್ಮರಣ
ಚಿತ್ರದುರ್ಗ , ಸೋಮವಾರ, 15 ಫೆಬ್ರವರಿ 2016 (09:05 IST)
ಲಾರಿ ಮತ್ತು ಇನ್ನೊವಾ ಕಾರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಕ್ರಾಸ್ ಬಳಿ ನಡೆದಿದೆ. 
 
ಮೃತ ದುರ್ದೈವಿಗಳನ್ನು ರಾಘವೇಂದ್ರ, ರಮೇಶ್, ವೀರೇಶ್ ಗೌಡ, ವೀರಭದ್ರಯ್ಯ ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ಬಾಬು ಹಾಗೂ ವೆಂಕಟರೆಡ್ಡಿ ಅವರನ್ನ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
 
ಮೃತರೆಲ್ಲ ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. 
 
ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆಯನ್ನು ಕೈಗೊಂಡಿದ್ದಾರೆ. 

Share this Story:

Follow Webdunia kannada