ನಸುಕಿನ ಜಾವ 4 ಗಂಟೆ ಸುಮಾರಿಗೆ ಕಾರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ದುರಂತದಲ್ಲಿ ಒಂದು ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಜೇಶ್ವರದ ಎ.ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಮೃತರು ಕೇರಳದ ತ್ರಿಶೂರಿನ ನಿವಾಸಿಗಳೆಂದು ತಿಳಿದು ಬಂದಿದೆ.
ಕಾರು ತ್ರಿಶೂರಿನಿಂದ ಮಂಗಳೂರಿನ ಕಡೆ ಬರುತ್ತಿದ್ದಾಗ ಎದುರಿನಿಂದ ಬಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್ನಲ್ಲಿದ್ದ ಪತಿ- ಪತ್ನಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನುಜ್ಜುಗುಜ್ಜಾಗಿರುವ ಕಾರ್ ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.
ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ