Select Your Language

Notifications

webdunia
webdunia
webdunia
webdunia

ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣವೇ ಕಾಂಗ್ರೆಸ್ ಕೊಡುಗೆ: ಸದಾನಂದಗೌಡ

ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣವೇ ಕಾಂಗ್ರೆಸ್ ಕೊಡುಗೆ: ಸದಾನಂದಗೌಡ
ಮೈಸೂರು , ಸೋಮವಾರ, 6 ಜೂನ್ 2016 (12:43 IST)
ಚುನಾವಣೆಯಲ್ಲಿ ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣವೇ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ಗಂಭೀರವಾಗಿ ಆರೋಪಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ, ನಾವು ಆಪರೇಶನ್ ಕಮಲ ಮಾಡಿದ್ದಕ್ಕೆ ಪಶ್ಚಾತಾಪ ಪಟ್ಟಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷದಂತೆ ಚೀಲದ ತುಂಬಾ ದುಡ್ಡು ತಂದು ಒಬ್ಬ ಶಾಸಕರಿಗೆ ಇಷ್ಟು ಎಂದು ರೆಟ್ ಫಿಕ್ಸ್ ಮಾಡಿಲ್ಲ. ಚುನಾವಣೆಯಲ್ಲಿ ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣವೇ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ. ಚುನಾವಣೆಯಲ್ಲಿ ಕಾಂಗ್ರೆಸ್ ಏನು ಮಾಡಿಲ್ಲ ಹೇಳಿ ಎಂದು ರಾಜ್ಯಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
 
ವೋಟಿಗಾಗಿ ನೋಟು ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕರನ್ನು ಚುನಾವಣೆಯಿಂದ ದೂರವಿಡಿ ಎಂದು ರಾಜ್ಯ ಚುನಾವಣೆಗೆ ಮನವಿ ಮಾಡಿರುವ ಸದಾನಂದ ಗೌಡರು, ರಾಜ್ಯಸಭೆ ಚುನಾವಣೆಗೆ ಕೇಂದ್ರ ಸರಕಾರ ಹೊಸ ಕಾನೂನನ್ನು ಜಾರಿಗೆ ತರುತ್ತಿದೆ. ಶಾಸಕರು ಸೂಚಿತರಿಗೆ ತೋರಿಸಿ ಮತ ಚಲಾಯಿಸುವ ಕಾನೂನನ್ನು ಜಾರಿಗೆ ತರುತ್ತಿದ್ದೇವೆ. ಈ ಕುರಿತು 6 ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ. 
 
ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವು ಖಚಿತ. ಪಕ್ಷೇತರರು ನಮ್ಮನ್ನು ಬೆಂಬಲಿಸುತ್ತಾರೆ. ನಾವು ಯಾರಿಗೂ ಹಣದ ಆಮಿಷ ಒಡ್ಡಿಲ್ಲ. ಸ್ವಯಂ ಪ್ರೇರಿತವಾಗಿ ಬೆಂಬಲಿಸುವವರನ್ನು ದೂರವಿಡುವುದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ವೇಳೆ, ರಾಹುಲ್ ಪಪ್ಪು ಆದ್ರೆ, ಪ್ರಧಾನಿ ಮೋದಿ ಫೇಕು: ದಿಗ್ವಿಜಯ್ ಸಿಂಗ್