Webdunia - Bharat's app for daily news and videos

Install App

ಹೊಸಕೋಟೆ ಶಾಸಕರ ಸಿಲ್ಲಿ ಪಾಲಿಟಿಕ್ಸ್

Webdunia
ಗುರುವಾರ, 10 ಫೆಬ್ರವರಿ 2022 (19:24 IST)
ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಟೇಪ್ ಕಟ್ ಮಾಡುವ ವಿಚಾರದಲ್ಲಿ ಇಬ್ಬರು ಜನ ಪ್ರತಿನಿಧಿಗಳು ಸಾರ್ವಜನಿಕರ ಮುಂದೆಯೇ ಕಿತ್ತಾಡಿಕೊಂಡಿದ್ದಾರೆ. ಏಕವಚನದಲ್ಲೇ ಬೈದಾಡಿಕೊಂಡ ಈ ಇಬ್ಬರು ನಾಯಕರಿಗೆ ಲೋಕಲ್ ಪಾಲಿಟಿಕ್ಸ್ ನಲ್ಲಿ ಇದು ಹೊಸದೇನಲ್ಲ.
ಟೇಪ್ ಕಟ್ ಮಾಡಲು ತಂದಿದ್ದ ಕತ್ತರಿಯನ್ನು ಮೊದಲು ಎತ್ತಿಕೊಂಡು ಶರತ್ ಟೇಪ್ ಕಟ್ ಮಾಡಲು ಮುಂದಾಗಿದ್ದಾರೆ. "ಸಚಿವರು ಅನ್ನುವ ಮರ್ಯಾದೆ ಬೇಡ್ವೇನಯ್ಯಾ, ಇದೇ ಆಗೋಯಿತು ನಿಂದು"ಎಂದು ಸಾರ್ವಜನಿಕರ ಸಮ್ಮುಖದಲ್ಲೇ ಎಂ.ಟಿ.ಬಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಶರತ್ ಬಚ್ಚೇಗೌಡ ಟೇಪ್ ಕಟ್ ಮಾಡಿ, ಕಟ್ಟಡದ ಒಳಗೆ ಹೋಗಿದ್ದಾರೆ.
 
ಇಬ್ಬರೂ ವೇದಿಕೆಗೆ ಹೋಗುವ ಜಾಗದಲ್ಲಿ, "ಅಪ್ಪಮಕ್ಕಳದ್ದು ಇದೇ ಆಗೋಯಿತು, ಬಚ್ಚೇಗೌಡ್ರ ಹಸ್ತಕ್ಷೇಪ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ"ಎಂದು ಎಂಟಿಬಿಯವರು, ಶರತ್ ಅವರಿಗೆ ಕೈತೋರಿಸಿ ಮಾತನಾಡಿದ್ದಾರೆ. ಇದಕ್ಕೆ ಶರತ್ ಬಚ್ಚೇಗೌಡ ಏರುಧ್ವನಿಯಲ್ಲಿ ತಿರುಗೇಟು ನೀಡಿದ್ದಾರೆ.
 
"ಕೈತೋರಿಸಿ ಮಾತನಾಡಬೇಡಿ, ಮರ್ಯಾದೆ ಕೊಟ್ಟು ಮಾತನಾಡಿ, ನನ್ನ ಬಗ್ಗೆ ಬೇಕಾದರೆ ಮಾತನಾಡಿ, ನನ್ನ ತಂದೆ ಬಚ್ಚೇಗೌಡ್ರ ವಿಚಾರವನ್ನು ಯಾಕೆ ಪ್ರಸ್ತಾವಿಸುತ್ತೀರಾ, ಅವರೇನು ಮಾಡಿದ್ದಾರೆ"ಎಂದು ಶರತ್ ಬಚ್ಚೇಗೌಡ ಆಕ್ರೋಶ ಹೊರಹಾಕಿದ್ದಾರೆ. ಆಗ ಅಲ್ಲಿದ್ದ ಎರಡೂ ನಾಯಕರ ಹಿಂಬಾಲಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ. ಅಲ್ಲಿಗೂ ಮುಗಿಯಲಿಲ್ಲ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments