Select Your Language

Notifications

webdunia
webdunia
webdunia
webdunia

ಸರ್ಕಾರದ ವಿರುದ್ಧ ಹೋಟೆಲ್ ಮಾಲೀಕರ ಕಿಡಿ

ಸರ್ಕಾರದ ವಿರುದ್ಧ ಹೋಟೆಲ್ ಮಾಲೀಕರ ಕಿಡಿ
bangalore , ಬುಧವಾರ, 21 ಜೂನ್ 2023 (14:22 IST)
ರಾಜ್ಯದಲ್ಲಿ ಕರೆಂಟ್​​ ಬಿಲ್​​ನಿಂದಾಗಿ ಜನ ಬೆಚ್ಚಿಬಿದ್ದಿದ್ದಾರೆ. ವಿದ್ಯುತ್ ಬಿಲ್ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಂಘ ಕಿಡಿಕಾರಿದೆ. ವಿದ್ಯುತ್ ದರ ಮುಂದೂಡಲು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಇಂಧನ ಸಚಿವ ಕೆ.ಜೆ ಜಾರ್ಜ್​​ಗೆ ಪತ್ರ ಬರೆದಿದ್ದಾರೆ. ವಿದ್ಯುತ್ ದರ ಹೆಚ್ಚಳ 1 ವರ್ಷಕ್ಕೆ ಮುಂದೂಡಬೇಕು. ವಿದ್ಯುತ್ ತೆರಿಗೆಯನ್ನು ಶೇಕಡಾ 9ರಿಂದ 3ಕ್ಕೆ ಇಳಿಕೆ ಮಾಡಬೇಕು. ವಿದ್ಯುತ್ ನಷ್ಟವನ್ನು ಕಡಿಮೆ ಮಾಡಿ. ಸರ್ಕಾರದ ಇಲಾಖೆಗಳ ಬಾಕಿ ಮೊತ್ತ ಬಡ್ಡಿ ಸಹಿತ ಸಂಗ್ರಹಿಸಿ. ಪ್ರಿಪೇಡ್​​​​​ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣ ಹಿಂತಿರುಗಿಸಬೇಕು ಎಂದು ಪತ್ರದ ಮೂಲಕ ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಶಿವಕುಮಾರ್ ಶಪಥ