Webdunia - Bharat's app for daily news and videos

Install App

ಈ ವಿಷಯಕ್ಕಾಗಿ ಗ್ರಾಹಕರನ್ನೇ ಥಳಿಸಿದ ಹೊಟೇಲ್ ಸಿಬ್ಬಂದಿ

Webdunia
ಮಂಗಳವಾರ, 7 ಜನವರಿ 2020 (15:48 IST)
ಗ್ರಾಹಕರನ್ನೇ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರೋ ಘಟನೆ ನಡೆದಿದೆ.

ಊಟ ಮಾಡಿದ ಬಿಲ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರ ಮೇಲೆ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಪಿಬಿ ರಸ್ತೆಯ ನಿಯಾಜ್ ಹೊಟೇಲಿನಲ್ಲಿ ನಡೆದಿದೆ.

ಗಬ್ಬೂರು ನಿವಾಸಿಗಳಾದ  ಪ್ರಕಾಶ ಬಿದರಕುಂದಿ ಹಾಗೂ ಮುತ್ತಪ್ಪ ಬಿದರಕುಂದಿ ಎಂಬುವವರು ಊಟ‌ ಮಾಡಿದ ‌ಬಿಲ್ ಕೊಡಲು ಹೋಗಿದ್ದಾರೆ. ಆದರೆ ಬಿಲ್ ನಲ್ಲಿ 60 ರೂಪಾಯಿ ವ್ಯತ್ಯಾಸವಾಗಿದೆ. ಇದಕ್ಕೆ ಗ್ರಾಹಕರು 60 ರೂ. ಹೆಚ್ಚು ಬಿಲ್ ಹಚ್ಚಿದ್ದೀರಿ ಕೋಡೋದಿಲ್ಲ ಎಂದಿದ್ದಾರೆ.

ಹೀಗಾಗಿ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಮಾತಿಕ ಚಕಮಕಿ ನಡೆದು, ಹೊಡೆದಾಟವಾಗಿದೆ. ಹೊಟೇಲ್ ಸಿಬ್ಬಂದಿ ಗ್ರಾಹಕರಿಬ್ಬರ ಮೇಲೆ ನೀರಿನ ಜಗ್ ಹಾಗೂ ಕಬ್ಬಿಣದ ರಾಡುಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲ್ಲೆ ಮಾಡಿರೋ ವಿಡಿಯೋವನ್ನು ಗ್ರಾಹಕರು ಚಿತ್ರಿಕರಿಸಿದ್ದಾರೆ. ಈ  ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments