Webdunia - Bharat's app for daily news and videos

Install App

ಮಳೆಗೆ ನೆಲಕ್ಕುರುಳಿದ ಮನೆ ಜಸ್ಟ್ ಮಿಸ್ ..!!!

Webdunia
ಗುರುವಾರ, 4 ಆಗಸ್ಟ್ 2022 (17:20 IST)
ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಬಿದ್ದರೂ ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ಸಂಪಂಗಿರಾಮನಗರದಲ್ಲಿ ನಡೆದಿದೆ. ಸಂಪಂಗಿ ರಾಮನಗರದಲ್ಲಿರುವ ಚಂದ್ರು ಎಂಬುವವರ ಮನೆ ಗೋಡೆ ಕುಸಿದುಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.
 
ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಸಂಪೂರ್ಣವಾಗಿ ತೇವಗೊಂಡಿದ್ದು, ಇಂದು ಬೆಳಗ್ಗೆ 9.30ಕ್ಕೆ ಏಕಾಏಕಿ ಮನೆಯ ಒಂದು ಗೋಡೆ ಕುಸಿದುಬಿತ್ತು. ಗೋಡೆ ಕುಸಿದು ಬೀಳುವ ಸಂದರ್ಭದಲ್ಲಿ ಕುಟುಂಬಸ್ಥರೆಲ್ಲ ಮನೆಯಲ್ಲೇ ಇದ್ದೆವು. ಕುಸಿತ ಆರಂಭವಾಗುತ್ತಿದ್ದಂತೆ ನಾವೆಲ್ಲ ಎಚ್ಚೆತ್ತುಕೊಂಡು ಹೊರಬಂದ ಹಿನ್ನೆಲೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಚಂದ್ರು ತಿಳಿಸಿದ್ದಾರೆ.
 
ಘಟನಾ ಸ್ಥಳಕ್ಕೆ ಮಾಜಿ ಕಾಪೆರ್ರೇಟರ್ ಗೋಪಿ ಭೇಟಿ ನೀಡಿ ಪರಿಶೀಲಿಸಿದರು. ಮನೆ ಕಳೆದುಕೊಂಡು ಬೀದಿ ಪಾಲಾಗಿರುವ ಚಂದ್ರು ಕುಟುಂಬಸ್ಥರಿಗೆ ಬಿಬಿಎಂಪಿ ವತಿಯಿಂದಲೇ ಮನೆ ನಿರ್ಮಿಸಿಕೊಡುವಂತೆ ಮುಖ್ಯ ಆಯುಕ್ತರಿಗೆ ಮನವಿ ಮಾಡಿಕೊಳ್ಳು ವುದಾಗಿ ತಿಳಿಸಿದರು.
 
ರಸ್ತೆ ಗುಂಡಿಗೆ ಬಿದ್ದು ಗಾಯ
ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿದ್ದು ಸರ್ಕಾರಿ ನೌಕರರೊಬ್ಬರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಇಂದಿರಾನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ನಡೆದಿದೆ.
 
ವೆಂಕಟೇಶ್ ಅವರ ಕಾಲಿನ ಇಮ್ಮಡಿ ಒಡೆದು ಹೋಗಿದ್ದು ಸುಮಾರು 22 ಹೊಲಿಗೆಯನ್ನು ಹಾಕಲಾಗಿದೆ. ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ರಸ್ತೆಗಳು ಗುಂಡಿಮಯವಾಗಿದ್ದು ಪಾತ್ಹೋಲ್ಗಳಿಗೆ ಇನ್ನೆಷ್ಟು ಬಲಿ ಬೇಕೋ? ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಎಲ್‌ಪಿಜಿ ಲಭ್ಯತೆಯಲ್ಲಿ ಸುಧಾರಿಕೆ, ಗ್ರಾಹಕರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments