Webdunia - Bharat's app for daily news and videos

Install App

ಬಿಜೆಪಿ ಶಾಸಕರ ಬೆಂಬಲಿಗರಿಂದ ಮನೆ ಧ್ವಂಸ?

Webdunia
ಬುಧವಾರ, 13 ಫೆಬ್ರವರಿ 2019 (12:28 IST)
ಬಿಜೆಪಿ ಶಾಸಕರ ಬೆಂಬಲಿಗರೊಬ್ಬರು ಮನೆಯೊಂದನ್ನು ಧ್ವಂಸಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಾಸಕರ ವಿರುದ್ಧವೂ ಆ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.

ಮೂಡಿಗೆರೆ ಶಾಸಕರವಿರುದ್ಧ ದೌರ್ಜನ್ಯ  ಆರೋಪ ಕೇಳಿಬಂದಿದೆ. ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಮನೆ ಗ್ರಾಮದ ಲೋಕೇಶ್ ಕುಟುಂಬಸ್ಥರು ಶಾಸಕರ ಹಾಗೂ ಶಾಸಕರ ಬೆಂಬಲಿಗರ ವಿರುದ್ಧ ಆರೋಪ ಮಾಡಿದ್ದಾರೆ.

ಲೋಕೇಶ್ ಗೆ ಸಂಬಂಧಿಸಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂಪಾಯಿ‌ ಬೆಲೆಬಾಳುವ ಕಾಫಿ ಕೊಯ್ದುಕೊಂಡು ಹೋಗಲಾಗಿದೆ. ಕಲ್ಮನೆ ಗ್ರಾಮದ ಲೋಕೇಶ್ ಗೆ ಸೇರಿರುವ ಜಮೀನಿನಲ್ಲಿ ಈ ಕೃತ್ಯ ನಡೆದಿದೆ. ಅಲ್ಲದೇ ಶಾಸಕರ ಬೆಂಬಲಿಗರಿಂದ ಮನೆ ದ್ವಂಸವಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಶಾಸಕರ ಬೆಂಬಲಿಗರಿಂದ ಲೋಕೇಶ್ ಕುಟುಂಬದವರಿಗೆ  ಕೊಲೆ ಬೆದರಿಕೆ ಹಾಕಲಾಗುತ್ತಿದೆಯಂತೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ರು ಪ್ರಯೋಜನವಾಗಿಲ್ಲ ಎಂದು ಆರೋಪ ಮಾಡಲಾಗುತ್ತಿದೆ. ಹೀಗಾಗಿ ಬಾಳೂರು ಪೊಲೀಸ್ ಠಾಣೆ ಮುಂದೆ ಧರಣಿ ಕೂಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments