Webdunia - Bharat's app for daily news and videos

Install App

ಪ್ರಿಯಕರ ಸಿಗಲಿಲ್ಲವೆಂಬ ಬೇಸರಕ್ಕೆ ವಿವಾಹಿತೆ ಆತ್ಮಹತ್ಯೆ, ಪ್ರಿಯಕರನೂ ನೇಣಿಗೆ ಶರಣು

Krishnaveni K
ಬುಧವಾರ, 18 ಡಿಸೆಂಬರ್ 2024 (09:47 IST)
ಮಂಡ್ಯ: ಪ್ರಿಯಕರ ಸಿಗಲಿಲ್ಲವೆಂಬ ಕಾರಣಕ್ಕೆ ವಿವಾಹಿತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ ಘಟನೆ ಮಂಡ್ಯದಲ್ಲಿ ನಡೆದಿದೆ.

20 ವರ್ಷದ ಸೃಷ್ಟಿ ಎಂಬ ವಿವಾಹಿತ ಮಹಿಳೆ ಮತ್ತು ಪ್ರಿಯಕರ 25 ವರ್ಷದ ಪ್ರಸನ್ನ ಜೀವ ಕಳೆದುಕೊಂಡವರು. ಇಬ್ಬರೂ ಈ ಮೊದಲಿನಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮನೆಯವರು ಸೃಷ್ಟಿಯನ್ನು ದಿನೇಶ್ ಎಂಬವರ ಜೊತೆ ಒಂದು ವರ್ಷದ ಹಿಂದಷ್ಟೇ ಮದುವೆ ಮಾಡಿಸಿದ್ದರು. ಇತ್ತ ಪ್ರಸನ್ನ ಕೂಡಾ ಸೃಷ್ಟಿಯ ಸ್ನೇಹಿತೆ ಸ್ಪಂದನಾ ಜೊತೆ ಮದುವೆಯಾಗಿದ್ದ.

ಮದುವೆ ಬಳಿಕವೂ ಇಬ್ಬರೂ ಪರಸ್ಪರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಸೃಷ್ಟಿ ಮತ್ತು ಪತಿ ದಿನೇಶ್ ನಡುವೆ ಆಗಾಗ ಜಗಳವಾಗುತ್ತಿತ್ತು. ಡಿಸೆಂಬರ್ 11 ರಂದು ಸೃಷ್ಟಿ ಮನೆಯಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ದಿನೇಶ್ ಪೊಲೀಸರಿಗೂ ದೂರು ನೀಡಿದ್ದ. ಡಿಸೆಂಬರ್ 16 ರಂದು ಸೃಷ್ಟಿ ಮೃತದೇಹ ಶಿಂಸಾ ನದಿಯಲ್ಲಿ ಕಂಡುಬಂದಿತ್ತು.

ಸೃಷ್ಟಿ ಆತ್ಮಹತ್ಯೆಯ ಜಾಡು ಹಿಡಿದು ಹೊರಟ ಪೊಲೀಸರಿಗೆ ಪ್ರಸನ್ನ ಜೊತೆಗಿನ ಲವ್ ಅಫೇರ್ ಗೊತ್ತಾಗಿತ್ತು. ಹೀಗಾಗಿ ಆತನನ್ನು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ಪ್ರೇಯಸಿಯ ಆತ್ಮಹತ್ಯೆಯಿಂದ ಆಘಾತಗೊಂಡಿದ್ದ ಆತನೂ ನೇಣಿಗೆ ಶರಣಾಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments