Select Your Language

Notifications

webdunia
webdunia
webdunia
webdunia

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ಆರೋಪ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ಆರೋಪ
bangalore , ಶನಿವಾರ, 25 ಫೆಬ್ರವರಿ 2023 (18:40 IST)
ಅವರದ್ದು ನಾಲ್ಕು ವರ್ಷದ ದಾಂಪತ್ಯ ಜೀವನ.ಪರಸ್ಪರ ಪ್ರೀತಿಸಿ ವಿವಾಹವಾಗಿದ್ರು.ಆದ್ರೆ ಪತ್ನಿ ಮನೆಯಿಂದ ವರದಕ್ಷಿಣೆ ತರುವಂತೆ ಪತಿ ಪಟ್ಟು ಹಿಡಿದಿದ್ದ.ಕುಟುಂಬಸ್ಥರೆಲ್ಲ ಸೇರಿ ಇನ್ನಿಲ್ಲದಂತೆ ಚಿತ್ರಹಿಂಸೆ ಕೊಡ್ತಿದ್ರಂತೆ.ಇದರಿಂದ ಮನನೊಂದ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ.ಏರಿಯಾ ಜನರೆಲ್ಲ ಸೇರಿದ್ದಾರೆ..ನ್ಯಾಯಕ್ಕಾಗಿ ಪಟ್ಟು ಹಿಡಿದಿದ್ದಾರೆ..ಹೆತ್ತ ಕರಳು ಕಣ್ಣೀರು ಹಾಕ್ತಿದ್ರೆ..ಜನರ ಆಕ್ರೋಶದ ಕಟ್ಟೆ ಒಡೆದಿದೆ.ಮಹಿಳೆಯರೆಲ್ಲ ಸೇರು ಸಾವಿಗೆ ಕಾರಣರಾದ ಪಾಪಿಗಳಿಗೆ ಹಿಡಿಶಾಪ‌ ಹಾಕ್ತಿದ್ದಾರೆ.

ಬೆಂಗಳೂರು ರೈಲ್ವೇ ನಿಲ್ದಾಣ ಸಮೀಪದಲ್ಲೇ ಇರೊ ಏರಿಯಾ‌.ಲಕ್ಷ್ಮಣ್ ಪುರಿಯ ಎರಡನೇ ಅಡ್ಡರಸ್ತೆ.ಇದೇ ಸ್ಲಂ ಒಂದರಲ್ಲಿರುವ ಸಣ್ಣ ಮನೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಹೀಗೆ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿರುವ ಗೃಹಿಣಿ ಹೆಸರು ಸೌಂದರ್ಯ.ಹೌದು ಸೌಂದರ್ಯ ಮತ್ತು ವಿಘ್ನೇಶ್ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು.ಆದ್ರೆ ಮಕ್ಕಳಿರಲಿಲ್ಲ.ಜೊತೆಗೆ ವಿಘ್ನೇಶ್ ,ವಿಘ್ನೇಶ್ ತಾಯಿ ಇರ್ಚಮ್ಮ ಮತ್ತು ಸಂಬಂಧಿಕರಾದ ಯಳಿಲ್,ವಿಮಲಾ,ರೇವತಿ,ಶಿವು ಸೇರಿದಂತೆ ಹಲವರು ಕಿರುಕುಳ ಕೊಡ್ತಿದ್ರಂತೆ.ಇದೇ ಕಾರಣಕ್ಕೆ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸ್ತಿದ್ದಾರೆ.

ವಿಪರ್ಯಾಸ ಅಂದ್ರೆ ಸೌಂದರ್ಯ ತಂದೆ ಕೆಲ ವರ್ಷದ ಹಿಂದೆ ಸಾವನ್ನಪ್ಪಿದ್ರು.ತಾಯಿಗೂ ಕ್ಯಾನ್ಸರ್ ಇದ್ದು ತಮಿಳುನಾಡಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದು ಚಿಕಿತ್ಸೆ ಪಡಿತಿದ್ದಾರೆ‌.ಆದರೆ ಇದೇ ರೀತಿ ವರದಕ್ಷಿಣೆ ತರುವಂತೆ ನಿನ್ನೆ ಕೂಡ ಮನೆಯಲ್ಲಿ ಗಲಾಟೆಯಾಗಿದೆ.ಸಂಬಂಧಿಕರೆಲ್ಲ ಸೇರಿ ಥಳಿಸಿದ್ದಾರಂತೆ.ಇದರಿಂದ ನೊಂದು ಗಂಡನ ಮನೆ ಪಕ್ಕದಲ್ಲೇ ಇದ್ದ ತನ್ನ ತವರು ಮನೆಗೆ ತೆರಳಿ ಸಂಜೆ 3.30 ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಏರಿಯಾ ಜನ ಮತ್ತು ಕುಟುಂಬಸ್ಥರು ಪತಿ ಕುಟುಂಬಸ್ಥರೇ ಈ ಸಾವಿಗೆ ಕಾರಣ.ಅವರಿಗೆ ತಕ್ಕ‌ ಶಿಕ್ಷೆ ಆಗಲೇಬೇಕು ಅಂತಾ ಆಗ್ರಹಿಸಿದ್ದು,ಘಟನೆ ಸಂಬಂಧ ಶೇಶಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಅಲ್ದೆ ಸೌಂದರ್ಯ ಸಾವಿಗೆ ನ್ಯಾಯ ಸಿಗಬೇಕು ಅಂತ ಠಾಣೇ ಎದುರು ಮೃತ ದೇಹ ವಿಟ್ಟು ಪ್ರತಿಭಟನೆ ಕೂಡ ಮಾಡಿ. ಆರೋಪಿ ಗೆ ಸರಿಯಾದ ಶಿಕ್ಷೆ ಆಗಬೇಕು ಇನ್ಮುಂದೆ ಇಂತಹ ಪ್ರಕರಣಗಳು ಆಗದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತೆಯನ್ನ ಚಾಕು ಇರಿದು ಕೊಂದ ಅಳಿಯ..!